ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.
ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm