ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.





ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm