ಬ್ರೇಕಿಂಗ್ ನ್ಯೂಸ್
27-04-24 11:06 pm Mangalore Correspondent ಕರಾವಳಿ
ಮಂಗಳೂರು, ಎ.27: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಮನೆ ಬೆಳಗುವ ಜತೆಗೆ, ಕುಟುಂಬಗಳಲ್ಲಿ ಆತ್ಮಸ್ಥೈರ್ಯ ತುಂಬಿದೆ. ಇದು ನಮ್ಮ ಗೆಲುವಿಗೆ ಮುಖ್ಯ ಕಾರಣವಾಗಲಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ, ನೈಜ ವಿಚಾರವನ್ನು ಜನತೆಯ ಮುಂದಿಟ್ಟು ಪ್ರಚಾರ ಕಾರ್ಯ ನಡೆಸಿದ್ದೇವೆ. ಪಕ್ಷದ ನಾಯಕರು, ಕಾರ್ಯಕರ್ತರು ಕುಟುಂಬವಾಗಿ ಚುನಾವಣೆ ಎದುರಿಸಿದ್ದೇವೆ. ಪ್ರತಿಯೊಬ್ಬರೂ ನನ್ನ ಜತೆ ಸಹಕರಿಸಿದ್ದು, ಎದುರಾಳಿಗಳ ದ್ವೇಷಕ್ಕೆ ಪ್ರತಿಯಾಗಿ ಪ್ರೀತಿಯಿಂದ ಮತದಾರರ ಮನವೊಲಿಸುವ ಕಾರ್ಯ ಮಾಡಿದ್ದೇವೆ. ಪಕ್ಷದ ಪ್ರಚಾರ ಕಾರ್ಯದಲ್ಲಿ ಸಹಕರಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿಯವರು ಒಂದೂವರೆ ಲಕ್ಷದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಯಾರೂ ಸೋಲಲು ಸಿದ್ಧ ಇರುವುದಿಲ್ಲ. ಗೆಲ್ಲುವುದಕ್ಕಾಗಿಯೇ ಸ್ಪರ್ಧೆ ಮಾಡಿರುವುದು. ಆದರೆ ಬಿಜೆಪಿಯವರು ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ನಾವು ಇಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎಂದು ಈ ಹಿಂದೆ ಎಲ್ಲಿಯೂ ಹೇಳಿಲ್ಲ. ಜೂ. 4ರವರೆಗೆ ಎಲ್ಲರೂ ಸಂತೋಷದಿಂದ ಫಲಿತಾಂಶವನ್ನು ಎದುರು ನೋಡೋಣ ಎಂದರು.
ಕಾಂಗ್ರೆಸ್ ಈ ಹಿಂದೆಯಾಗಲಿ ಈ ಬಾರಿಯಾಗಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರಗಳು ಈ ಬಾರಿ ಚರ್ಚೆಯಾಗಿವೆ. ನಾನು ಯಾವತ್ತೂ ಜಾತಿ ಹೆಸರಿನಲ್ಲಿ ಮತ ಕೇಳಿಲ್ಲ. ಬದಲಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಶಕ್ತಿಯಾಗಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ಮತದಾರರನ್ನು ಮನವಿ ಮಾಡಿದ್ದೇನೆ. ಅದಕ್ಕವರು ಸ್ಪಂದಿಸಿರುವ ವಿಶ್ವಾಸವಿದೆ ಎಂದವರು ಹೇಳಿದರು. ಗೋಷ್ಟಿಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ ಜೈನ್, ಶಶಿಧರ ಹೆಗ್ಡೆ, ಶುಭೋದಯ ಆಳ್ವ, ಮುಹಮ್ಮದ್ ಉಪಸ್ಥಿತರಿದ್ದರು.
The Congress party's guarantee house has been lit up and the families have been instilled with confidence. This will be the main reason for our victory," said Padmaraj Ramayya, congress candidate from Dakshina Kannada.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm