ಬ್ರೇಕಿಂಗ್ ನ್ಯೂಸ್
29-04-24 11:05 am Mangalore Correspondent ಕರಾವಳಿ
ಉಳ್ಳಾಲ,ಎ. 29: ಎರಡು ಪುಟ್ಟ ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಸ್ವಸಹಾಯ ಸಂಘದ ನಲ್ವತ್ತು ಸಾವಿರ ರೂಪಾಯಿ ಬಾಕಿ ಹಣದ ವಿಚಾರದಲ್ಲಿ ಆತ್ಮಹತ್ಯೆ ನಡೆದಿರುವುದಾಗಿ ಆರೋಪ ಕೇಳಿ ಬಂದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.



ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡಿಸಿದ್ದರೆಂದು ಆರೋಪ ಇದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಬರೀ ನಲ್ವತ್ತು ಸಾವಿರ ರೂಪಾಯಿ ವಿಚಾರದಲ್ಲಿ ಆತ್ಮಹತ್ಯೆಗೈದರೆ ಕೋಟಿ ಸಾಲ ವೀರರ ಕತೆಯೇನಾಗಬೇಕು, ಸಾವಿಗೆ ಇನ್ಯಾವುದೋ ಕಾರಣವಿರಬಹುದೆಂದು ಯೋಗೀಶ್ ಆಪ್ತರು ಹೇಳಿದ್ದಾರೆ. ಆರ್ ಬಿಐ ನ ನಿಯಮ ಉಲ್ಲಂಘಿಸಿ ಜನಸಾಮಾನ್ಯರಿಂದ ಚಕ್ರ ಬಡ್ಡಿ ಪೀಕಿಸುತ್ತಿರುವ ಸ್ವಸಹಾಯ ಸಂಘಗಳಿಗೂ ಲಗಾಮು ಹಾಕುವ ಕಾರ್ಯ ನಡೆಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿ ಆತ್ಮಹತ್ಯೆಗೆ ಯತ್ನ
ಯೋಗೀಶ್ ಸಾವನ್ನಪ್ಪಿದ್ದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
Mangalore 44 year old man in kumpala commits suicide in the toilet. The deceased has been identified as Yogish. Some finance matter has lead him to take this extreme step.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm