ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am