ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.
ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm