ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm