ಬ್ರೇಕಿಂಗ್ ನ್ಯೂಸ್
02-05-24 02:24 pm Mangalore Correspondent ಕರಾವಳಿ
ಮಂಗಳೂರು, ಮೇ.2: ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು ಹೆಸರಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಸ್.ಜೆ. ಯೇಸುರಾಜ್ ಎಂಬವರನ್ನು ನೇಮಕ ಮಾಡಲಾಗಿತ್ತು. ರಾಮನಗರ ಜಿಲ್ಲಾ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಓ ಆಗಿ ನೇಮಕ ಮಾಡಿರುವುದು ಚರ್ಚೆಗೂ ಕಾರಣವಾಗಿತ್ತು.
ಯೇಸುರಾಜ್ ಎನ್ನುವ ಹೆಸರಿನ ಕಾರಣಕ್ಕೆ ಅನ್ಯ ಧರ್ಮದವರನ್ನು ಹಿಂದುಗಳ ದೇವಸ್ಥಾನಕ್ಕೆ ನೇಮಕ ಮಾಡಿದ್ದಾರೆಂದು ಹಿಂದು ಸಂಘಟನೆಗಳ ನಾಯಕರು ಆಕ್ಷೇಪಿಸಿದ್ದರು. ಅವರ ಧರ್ಮದ ಹಿನ್ನೆಲೆಯ ಬಗ್ಗೆ ಪ್ರಶ್ನೆಯನ್ನೂ ಮಾಡಿದ್ದರು. ಈ ವಿಚಾರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದು, ಯೇಸುರಾಜ್ ಅವರ ಹಿನ್ನೆಲೆ, ಗೋತ್ರಗಳ ದಾಖಲೆಯನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಯೇಸುರಾಜ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರೆಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಚುನಾವಣೆ ಹೊತ್ತಲ್ಲಿ ಬಿಜೆಪಿಯ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸುವ ವಾಟ್ಸಪ್ ಫೇಕ್ ಯುನಿವರ್ಸಿಟಿಯ ಆಟವಾಗಿದೆ. ಯೇಸುರಾಜ್ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ ಎಂದು ಅವುಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಇರುವುದರಿಂದ ಜರನ್ನು ದಾರಿ ತಪ್ಪಿಸಿ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಇದೆಂದು ಟೀಕಿಸಿದ್ದಾರೆ.
ಮೈಸೂರು ಜಿಲ್ಲೆಯ ಸಿದ್ಧಾರ್ಥ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಸರ್ಟಿಫಿಕೇಟ್ ನಲ್ಲಿ ಪರಿಶಿಷ್ಟ ಜಾತಿಯೆಂದು ನಮೂದಾಗಿರುವ ದಾಖಲೆ, ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕು ಕೃಷ್ಣರಾಜನಗರ ವಾರ್ಡ್ ನಿವಾಸಿಯಾಗಿರುವ ಎಸ್.ಜೆ. ಯೇಸುದಾಸ್ ಅವರಿಗೆ ಕಂದಾಯ ಇಲಾಖೆ ನೀಡಿರುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸಚಿವ ರಾಮಲಿಂಗಾರೆಡ್ಡಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಹಿಂದು, ಪರಿಶಿಷ್ಟ ಜಾತಿಯೆಂದು ನಮೂದಾಗಿರುವುದನ್ನು ತೋರಿಸಲಾಗಿದೆ. ಆಮೂಲಕ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ವ್ಯಕ್ತಿಯಲ್ಲ ಎಂಬುದನ್ನು ಸಚಿವರು ತೋರಿಸಿದ್ದಾರೆ.
ಎರಡು ದಿನಗಳ ಹಿಂದೆ ಎಸ್.ಜೆ ಯೇಸುರಾಜ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಪ್ರಭಾರ ಎಇಓ ಆಗಿದ್ದ ಪರಮೇಶ್ ಅಧಿಕಾರ ಹಸ್ತಾಂತರ ಮಾಡಿದ್ದರೆ, ದೇವಳದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರು ಸ್ವಾಗತಿಸಿದ್ದರು. ಇದರ ಬಗ್ಗೆ ಪತ್ರಿಕೆಯಲ್ಲಿ ಬಂದ ಸುದ್ದಿ ತುಣುಕನ್ನು ಮುಂದಿಟ್ಟು ಹಿಂದು ಸಂಘಟನೆಗಳು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದು ಭಾರೀ ವೈರಲ್ ಆಗಿತ್ತು.
ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨
— Ramalinga Reddy (@RLR_BTM) May 2, 2024
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.
ಇದು @BJP4Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್… pic.twitter.com/OJTmYm3ZsD
Mangalore Yesuraj appointed as the new AEO of Shri Kukke Subrahmanya Temple sparks controversy, government says he's not a Christian but a Hindu.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm