ಬ್ರೇಕಿಂಗ್ ನ್ಯೂಸ್
03-05-24 06:31 pm Mangalore Correspondent ಕರಾವಳಿ
ಮಂಗಳೂರು, ಮೇ.03: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಿ ನೀರು ಪೂರೈಸಬೇಕು. ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ನೀರನ್ನು ಅನಗತ್ಯ ಪೋಲು ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದ್ದಾರೆ.
ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೊಲು ಮಾಡದೇ ಸದ್ಭಳಕೆ ಮಾಡಬೇಕು ಹಾಗೂ ನೀರಿನ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಪರಿಹರಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಸಾರ್ವಜನಿಕರಿಂದ ಬರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು, ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾ ವಹಿಸಬೇಕು ಎಂದು ಮಹಾನಗರಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಜಿಲ್ಲೆಯ ಪ್ರತಿ ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಅನ್ನು ರಚಿಸಿ ನೀರಿನ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ಡ್ಯಾಮ್ ಗಳನ್ನು ಹೊರತುಪಡಿಸಿ ನೀರಿನ ಪರ್ಯಾಯ ಮೂಲಗಳನ್ನು ಖುದ್ದಾಗಿ ಭೇಟಿ ನೀಡಿ ಅದರ ಬಗ್ಗೆ ಪಟ್ಟಿ ತಯಾರಿಸಬೇಕು ಎಂದರು.
ನೀರಿನ ಸಮಸ್ಯೆ ಇರುವ ಸೋಮೇಶ್ವರ ಹಾಗೂ ಕೋಟೆಕಾರು ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿದ್ದು, ಅದರ ಬಗ್ಗೆಯೂ ಗಮನಹರಿಸಬೇಕು. ಮುಂದಿನ ಮಳೆಗಾಲದ ವರೆಗೂ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದರು.


ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಮೆಸ್ಕಾಂ, ಆರೋಗ್ಯ ಇಲಾಖೆಗಳೂ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಯಾರಾಗಿರಬೇಕು. ಮಳೆಗಾಲ ಆಗಮಿಸುವ ಮೊದಲೇ ಯಾವೆಲ್ಲಾ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹ ಹಾಗೂ ಸಂಪರ್ಕಕ್ಕೆ ಸಿಗದೆ ಇರುವ ಪ್ರದೇಶಗಳ ಬಗ್ಗೆ ಮಾಹಿತಿ ಕಲೆ ಹಾಕಬೇಕು ಹಾಗೂ ಯಾವುದೇ ರೀತಿಯ ಹಾನಿ ಉಂಟಾಗದಂತೆ ರಕ್ಷಣಾ ವ್ಯವಸ್ಥೆಗಳನ್ನು ಮಾಡಬೇಕು ಎಂದರು.
ರಸ್ತೆ ಕಡಿತಗೊಂಡು ಸಂಪರ್ಕಕ್ಕೆ ಸಿಗದ ಪ್ರದೇಶದಲ್ಲಿ ಗರ್ಭಿಣಿಯರು ವಯಸ್ಸಾದವರ ಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಆಗಬೇಕು ಎಂದರು. ನೆಟ್ವರ್ಕ್ ಸಿಗದ ಪ್ರದೇಶದಲ್ಲಿ ಜನರಿಂದ ಮಾಹಿತಿ ಪಡೆಯಲು ಮತ್ತು ಅವರಿಗೆ ಮಾಹಿತಿಯನ್ನು ನೀಡಲು ಪರ್ಯಾಯ ವ್ಯವಸ್ಥೆಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್, ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ಸಿಬಿ, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೋಹಾಪಾತ್ರ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Strict action against those wasting water unnecessarily in Mangalore says DC. Due to extreme heat weather water crisis have begin in Mangalore. They for DC Mullai Muhilan as requested public not to waste water.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm