ಬ್ರೇಕಿಂಗ್ ನ್ಯೂಸ್
04-05-24 12:41 pm Mangalore Correspondent ಕರಾವಳಿ
ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇನೆ, ಎಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ಬಾಂಬ್ ಇಟ್ಟಿದ್ದೇನೆ. ಅಲ್ಲದೆ, ಕೆಲವು ವಿಮಾನಗಳಲ್ಲಿಯೂ ಮೂರು ಸ್ಫೋಟಕ ಸಾಮಗ್ರಿಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತ ಆಗಲಿದೆ. ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ. ಟೆರರೈಜರ್ಸ್ 111 ಎನ್ನುವ ಗ್ರೂಪ್ ಇದರ ಹಿಂದಿದೆ. ಇದು ಕೇವಲ ಬೆದರಿಕೆ ಅಲ್ಲ, ಟೆರರೈಸರ್ಸ್ 111 ಈ ರಕ್ತಪಾತದ ಹಿಂದೆ ಇದೆ ಎಂಬುದಾಗಿ ಇಂಗ್ಲಿಷಿನಲ್ಲಿ ಬೆದರಿಕೆ ಹಾಕಲಾಗಿದೆ.
ಎಪ್ರಿಲ್ 29ರಂದು ಬೆದರಿಕೆ ಪತ್ರ ಬಂದಿದ್ದು, ಇದು ತಿಳಿಯುತ್ತಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ, ಬಜ್ಪೆ ಠಾಣೆಯಲ್ಲಿ ಬೆದರಿಕೆ ಸಂದೇಶದ ಬಗ್ಗೆ ಪ್ರಕರಣ ದಾಖಲಾಗಿದೆ. ಆದರೆ, ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿ ಹಂಚಿಕೊಂಡಿಲ್ಲ. ಬೆದರಿಕೆ ಪತ್ರ ಬಂದಿರುವುದನ್ನು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Mangalore Airport receives bomb threat via email, security briefed at airport. The mail was sent on April 29th when 22 airports such airport in India received such bomb threat. A case has been registered at Bajpe police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm