ಬ್ರೇಕಿಂಗ್ ನ್ಯೂಸ್
04-05-24 09:50 pm Mangalore Correspondent ಕರಾವಳಿ
ಮಂಗಳೂರು, ಮೇ.4: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಈ ಬೇಸಿಗೆಯ ಅತಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮತ್ತು ಕಡಬದಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 36.4 ಡಿಗ್ರಿ, ಕಡಬದಲ್ಲಿ 37.9 ಡಿಗ್ರಿ, ಉಪ್ಪಿನಂಗಡಿಯಲ್ಲಿ 37.5 ಡಿಗ್ರಿ, ಬೆಳ್ತಂಗಡಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ 38.9 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಕಂಡುಬಂದಿದೆ. ಕಾರ್ಕಳದಲ್ಲಿ 36.6 ಡಿಗ್ರಿ, ಬ್ರಹ್ಮಾವರ 33.2 ಡಿಗ್ರಿ, ಕೋಟ 36.3, ಉಡುಪಿ 35.2, ಕುಂದಾಪುರ 34.9, ಬೈಂದೂರು 33.9, ಕಾಪು ಭಾಗದಲ್ಲಿ 36.5 ಡಿಗ್ರಿ ತಾಪಮಾನ ದಾಖಲಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರಕೋಡು ಎಂಬಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದ್ದು, ಕರಾವಳಿಯಲ್ಲಿ ಶನಿವಾರ ದಾಖಲಾದ ಅತಿ ಹೆಚ್ಚು ಉಷ್ಣತೆಯಾಗಿದೆ.
ಅತಿ ಹೆಚ್ಚು ತಾಪಮಾನದ ಕಾರಣ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಸೈಕ್ಲೋನ್ ಮಾದರಿಯ ವಾತಾವರಣ ಕಂಡುಬಂದಿದ್ದು, ಇದರ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವೆಡೆ ಮೇ 6ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ಮತ್ತು 7ರಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಿಡಿಲು ಮಿಂಚು ಸಹಿತ ಮಳೆಯಾಗಲಿದೆ.
Coastal Dakshina Kannada and Udupi districts recorded the highest temperature of this summer on Saturday. Meteorological department has informed about highest temperature recorded in Uppinangadi and Kadaba of Puttur taluk of Dakshina Kannada district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm