ಬ್ರೇಕಿಂಗ್ ನ್ಯೂಸ್
05-05-24 01:26 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬದ ಸಲಾಕೆಗಳು ಕಾರೊಳಗೆ ನುಗ್ಗಿದರೂ ಕಾರಲ್ಲಿದ್ದ ವೈದ್ಯರಿಬ್ಬರು ಪವಾಡ ಸದೃಶ ಅಪಾಯದಿಂದ ಪಾರಾಗಿರುವ ಘಟನೆ ಕುತ್ತಾರು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಡರಾತ್ರಿ ತೊಕ್ಕೊಟ್ಟಿನಿಂದ ಕುತ್ತಾರು ಕಡೆ ತೆರಳುತ್ತಿದ್ದ ಪೋಲೊ ಕಾರು ಬಬ್ಬುಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು ಪಲ್ಟಿಯಾಗಿದೆ. ಕಾರಲ್ಲಿದ್ದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೇರಳ ಮೂಲದ ವೈದ್ಯರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಹೊಂಡದಿಂದಲೇ ಹೊರ ಬಂದು ಮುರಿದು ಬಿದ್ದಿದೆ. ಕಂಬದ ಒಂದು ತುದಿಯು ಸಲಾಕೆ ಸಮೇತ ಕಾರೊಳಗೆ ಹೊಕ್ಕಿದರೂ ಚಾಲಕ ಪಾರಾಗಿದ್ದಾನೆ.


ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತ
ಅಪಘಾತದಿಂದ ವಿದ್ಯುತ್ ಕಂಬ ಮುರಿದಿದ್ದು ಮೆಸ್ಕಾಂ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಾರನ್ನ ತೆರವುಗೊಳಿಸುವ ಕೆಲಸ ನಡೆದಿದ್ದು ಮೆಸ್ಕಾಂ ಸಿಬ್ಬಂದಿ ಕ್ರೇನ್ ಮೂಲಕ ವಿದ್ಯುತ್ ಕಂಬ ತೆರವುಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದಿಂದ ಸ್ಥಳೀಯರು ಕರೆಂಟ್ ಇಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದರಿಂದ ಕಾರು ಮಾಲೀಕ ಮೆಸ್ಕಾಂಗೆ ದಂಡ ಪಾವತಿ ಮಾಡಲು ಒಪ್ಪಿಕೊಂಡಿದ್ದಾರಂತೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಬಬ್ಬುಕಟ್ಟೆ ಅಪಘಾತ ವಲಯ
ಕಾರು ನಿನ್ನೆ ತಡರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದಿವೆ. ಇಲ್ಲಿ ಶಾಲಾ ಕಾಲೇಜುಗಳು ಇರುವುದರಿಂದ ರಸ್ತೆಗೆ ಹಂಪ್ಸ್ ಅಳವಡಿಸುವ ಅವಶ್ಯಕತೆ ಇದೆ. ಮುಂದೆ ಅಪಘಾತಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Accident in Mangalore, polo car rams electric pole near Thokottu after losing control over speed.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm