ಬ್ರೇಕಿಂಗ್ ನ್ಯೂಸ್
05-05-24 01:26 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬದ ಸಲಾಕೆಗಳು ಕಾರೊಳಗೆ ನುಗ್ಗಿದರೂ ಕಾರಲ್ಲಿದ್ದ ವೈದ್ಯರಿಬ್ಬರು ಪವಾಡ ಸದೃಶ ಅಪಾಯದಿಂದ ಪಾರಾಗಿರುವ ಘಟನೆ ಕುತ್ತಾರು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಡರಾತ್ರಿ ತೊಕ್ಕೊಟ್ಟಿನಿಂದ ಕುತ್ತಾರು ಕಡೆ ತೆರಳುತ್ತಿದ್ದ ಪೋಲೊ ಕಾರು ಬಬ್ಬುಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು ಪಲ್ಟಿಯಾಗಿದೆ. ಕಾರಲ್ಲಿದ್ದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೇರಳ ಮೂಲದ ವೈದ್ಯರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಹೊಂಡದಿಂದಲೇ ಹೊರ ಬಂದು ಮುರಿದು ಬಿದ್ದಿದೆ. ಕಂಬದ ಒಂದು ತುದಿಯು ಸಲಾಕೆ ಸಮೇತ ಕಾರೊಳಗೆ ಹೊಕ್ಕಿದರೂ ಚಾಲಕ ಪಾರಾಗಿದ್ದಾನೆ.


ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತ
ಅಪಘಾತದಿಂದ ವಿದ್ಯುತ್ ಕಂಬ ಮುರಿದಿದ್ದು ಮೆಸ್ಕಾಂ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಾರನ್ನ ತೆರವುಗೊಳಿಸುವ ಕೆಲಸ ನಡೆದಿದ್ದು ಮೆಸ್ಕಾಂ ಸಿಬ್ಬಂದಿ ಕ್ರೇನ್ ಮೂಲಕ ವಿದ್ಯುತ್ ಕಂಬ ತೆರವುಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದಿಂದ ಸ್ಥಳೀಯರು ಕರೆಂಟ್ ಇಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದರಿಂದ ಕಾರು ಮಾಲೀಕ ಮೆಸ್ಕಾಂಗೆ ದಂಡ ಪಾವತಿ ಮಾಡಲು ಒಪ್ಪಿಕೊಂಡಿದ್ದಾರಂತೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಬಬ್ಬುಕಟ್ಟೆ ಅಪಘಾತ ವಲಯ
ಕಾರು ನಿನ್ನೆ ತಡರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದಿವೆ. ಇಲ್ಲಿ ಶಾಲಾ ಕಾಲೇಜುಗಳು ಇರುವುದರಿಂದ ರಸ್ತೆಗೆ ಹಂಪ್ಸ್ ಅಳವಡಿಸುವ ಅವಶ್ಯಕತೆ ಇದೆ. ಮುಂದೆ ಅಪಘಾತಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Accident in Mangalore, polo car rams electric pole near Thokottu after losing control over speed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm