ಬ್ರೇಕಿಂಗ್ ನ್ಯೂಸ್
05-05-24 08:53 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ಕೋಟೆಕಾರು ಗ್ರಾಮದ ಕಾರಣಿಕದ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಕೊಂಡಾಣ ಕ್ಷೇತ್ರದ ಭಂಡಾರಮನೆ ಪುಡಿಗೈದ ಪ್ರಕರಣದ ಐವರು ಆರೋಪಿಗಳು ಭಾಗವಹಿಸಬಾರದೆಂದು ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯ ಆಯುಕ್ತರು ನಿರ್ಬಂಧ ಹೇರಿದ್ದು, ಅಹಿತಕರ ಘಟನೆ ನಡೆಯದಂತೆ ಜಾತ್ರೆಗೆ ಬಿಗು ಪೊಲೀಸ್ ಬಂದೋಬಸ್ತು ಕಲ್ಪಿಸಲಾಗಿದೆ.
ಕೊಂಡಾಣ ಪಿಲಿಚಾಮುಂಡಿ, ಬಂಟ, ವೈದ್ಯನಾಥ, ಮುಂಡತ್ತಾಯ ಕ್ಷೇತ್ರದ ಗುರಿಕಾರರೆನ್ನುವ, ಕ್ಷೇತ್ರದ ನೂತನ ಭಂಡಾರ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ ಮುತ್ತಣ್ಣ ಶೆಟ್ಟಿ ಮತ್ತು ಸಹವರ್ತಿಗಳಾದ ಧೀರಜ್, ಶಿವರಾಜ್ ಶೆಟ್ಟಿ, ನವೀನ್ ಕುಮಾರ್, ಶಿವಪ್ರಸಾದ್ ಆಚಾರ್ಯ ಎಂಬ ಐವರು ತಾರಿಪಡ್ಪುವಿನ ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಭಾಗವಹಿಸದಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ನಿರ್ಬಂಧ ಹೇರಿದ್ದಾರೆ.



ಕಳೆದ ಮಾರ್ಚ್ ತಿಂಗಳ 3ರ ಭಾನುವಾರ ಬೆಳಗ್ಗೆ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ನೂತನ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಏಕಾಏಕಿ ಕೆಡವಿ ಹಾಕಿದ್ದರು. ಉಳ್ಳಾಲ ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಶೆಟ್ಟಿ, ಶಿವಪ್ರಸಾದ್ ಆಚಾರ್ಯ, ನವೀನ್ ಕುಮಾರ್ ಎಂಬುವವರನ್ನು ಬಂಧಿಸಿದ್ದರು. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದರು. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಭಾನುವಾರ ಕೊಂಡಾಣ ಕ್ಷೇತ್ರದ ಅಧೀನಕ್ಕೊಳಪಟ್ಟ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದಲ್ಲಿ ವಲಸರಿ ಜಾತ್ರೆ ನಡೆದಿದೆ. ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ಐವರು ಆರೋಪಿಗಳು ವಲಸರಿ ಜಾತ್ರೆ ಸೇರಿದಂತೆ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಜಾತ್ರೆ, ಉತ್ಸವಗಳಲ್ಲಿ ಭಾಗವಹಿಸದಂತೆ ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ಆರೋಪಿಗಳಿಗೆ ಶನಿವಾರ ಪ್ರತ್ಯೇಕವಾಗಿ ನೋಟೀಸು ಜಾರಿ ಮಾಡಿದ್ದರು. ಹೀಗಾಗಿ ವೈದ್ಯನಾಥನ ವಲಸರಿ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
Mangalore Kotekar Vaidyanatha valasari fair, no entry for five accused who destroyed the house of Kondana temple.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm