ಬ್ರೇಕಿಂಗ್ ನ್ಯೂಸ್
05-05-24 08:53 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ಕೋಟೆಕಾರು ಗ್ರಾಮದ ಕಾರಣಿಕದ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಕೊಂಡಾಣ ಕ್ಷೇತ್ರದ ಭಂಡಾರಮನೆ ಪುಡಿಗೈದ ಪ್ರಕರಣದ ಐವರು ಆರೋಪಿಗಳು ಭಾಗವಹಿಸಬಾರದೆಂದು ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯ ಆಯುಕ್ತರು ನಿರ್ಬಂಧ ಹೇರಿದ್ದು, ಅಹಿತಕರ ಘಟನೆ ನಡೆಯದಂತೆ ಜಾತ್ರೆಗೆ ಬಿಗು ಪೊಲೀಸ್ ಬಂದೋಬಸ್ತು ಕಲ್ಪಿಸಲಾಗಿದೆ.
ಕೊಂಡಾಣ ಪಿಲಿಚಾಮುಂಡಿ, ಬಂಟ, ವೈದ್ಯನಾಥ, ಮುಂಡತ್ತಾಯ ಕ್ಷೇತ್ರದ ಗುರಿಕಾರರೆನ್ನುವ, ಕ್ಷೇತ್ರದ ನೂತನ ಭಂಡಾರ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ ಮುತ್ತಣ್ಣ ಶೆಟ್ಟಿ ಮತ್ತು ಸಹವರ್ತಿಗಳಾದ ಧೀರಜ್, ಶಿವರಾಜ್ ಶೆಟ್ಟಿ, ನವೀನ್ ಕುಮಾರ್, ಶಿವಪ್ರಸಾದ್ ಆಚಾರ್ಯ ಎಂಬ ಐವರು ತಾರಿಪಡ್ಪುವಿನ ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಭಾಗವಹಿಸದಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ನಿರ್ಬಂಧ ಹೇರಿದ್ದಾರೆ.



ಕಳೆದ ಮಾರ್ಚ್ ತಿಂಗಳ 3ರ ಭಾನುವಾರ ಬೆಳಗ್ಗೆ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ನೂತನ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಏಕಾಏಕಿ ಕೆಡವಿ ಹಾಕಿದ್ದರು. ಉಳ್ಳಾಲ ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಶೆಟ್ಟಿ, ಶಿವಪ್ರಸಾದ್ ಆಚಾರ್ಯ, ನವೀನ್ ಕುಮಾರ್ ಎಂಬುವವರನ್ನು ಬಂಧಿಸಿದ್ದರು. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದರು. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಭಾನುವಾರ ಕೊಂಡಾಣ ಕ್ಷೇತ್ರದ ಅಧೀನಕ್ಕೊಳಪಟ್ಟ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದಲ್ಲಿ ವಲಸರಿ ಜಾತ್ರೆ ನಡೆದಿದೆ. ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ಐವರು ಆರೋಪಿಗಳು ವಲಸರಿ ಜಾತ್ರೆ ಸೇರಿದಂತೆ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಜಾತ್ರೆ, ಉತ್ಸವಗಳಲ್ಲಿ ಭಾಗವಹಿಸದಂತೆ ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ಆರೋಪಿಗಳಿಗೆ ಶನಿವಾರ ಪ್ರತ್ಯೇಕವಾಗಿ ನೋಟೀಸು ಜಾರಿ ಮಾಡಿದ್ದರು. ಹೀಗಾಗಿ ವೈದ್ಯನಾಥನ ವಲಸರಿ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
Mangalore Kotekar Vaidyanatha valasari fair, no entry for five accused who destroyed the house of Kondana temple.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm