ಬ್ರೇಕಿಂಗ್ ನ್ಯೂಸ್
03-12-20 01:13 pm Mangalore Correspondent ಕರಾವಳಿ
ಮಂಗಳೂರು, ಡಿ.3 : ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಲವ್ ಜಿಹಾದ್ ಪಿಡುಗಿನ ವಿರುದ್ಧ ಸಮಗ್ರವಾದ ಕಾನೂನು ಜಾರಿಗೆ ಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪಣಂಬೂರಿನಲ್ಲಿ ಪೊಲೀಸ್ ಕ್ವಾಟ್ರಸ್ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೃಹ ಸಚಿವರು, ಮಾಧ್ಯಮದ ಪ್ರಶ್ನೆಗೆ ಮೇಲಿನಂತೆ ಉತ್ತರ ನೀಡಿದ್ರು.
ಲವ್ ಜಿಹಾದ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಪಿಡುಗಾಗಿದೆ. ಇದರಿಂದ ಸಮಾಜದ ಸಾಮರಸ್ಯ, ಸ್ವಾಸ್ಥ್ಯ ಹಾಳಾಗಿದೆ. ಒಂದಷ್ಟು ಪ್ರಕರಣ ದಾಖಲಾಗಿದ್ದರೆ, ಅದೆಷ್ಟೋ ಪ್ರಕರಣಗಳು ದಾಖಲು ಆಗೇ ಇಲ್ಲ. ಇಂಥ ಪಿಡುಗಿನ ವಿರುದ್ಧ ಕಾನೂನು ತರುವುದು ಅವಶ್ಯವಾಗಿದ್ದು ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಕಾಯ್ದೆಯ ಅಂಶಗಳನ್ನು ನೋಡಿಕೊಂಡು ಸಮಗ್ರವಾದ ಕಾನೂನು ರಚನೆ ಮಾಡುತ್ತೇವೆ.
ಹಿಂದೆ ವರದಕ್ಷಿಣೆ ವಿರುದ್ಧ ಕಾನೂನು ಇರಲಿಲ್ಲ. ಹಾಗಂತ, ಅದೇ ಸಮಾಜದಲ್ಲಿ ಪಿಡುಗಾಗಿ ಬಂತು. ಹಾಗಾಗಿ ಏಂಟಿ ಡೌರಿ ಆ್ಯಕ್ಟ್ ಜಾರಿಗೆ ತರಲಾಯ್ತು. ಅದೇ ರೀತಿ ಲವ್ ಜಿಹಾದ್ ಸಮಾಜಕ್ಕೆ ಅಂಟಿದ ಪಿಡುಗಾಗಿದ್ದು ಈ ಬಗ್ಗೆ ಕೋರ್ಟ್ ಕೂಡ ವ್ಯಾಖ್ಯಾನ ಮಾಡಿದೆ ಎಂದು ಹೇಳಿದರು.
ಗಾಂಧೀಜಿ ಕಾಲದಲ್ಲೇ ಗೋಹತ್ಯೆ ನಿಷೇಧ ಆಗಬೇಕೆಂಬ ಆಗ್ರಹ ಅನೇಕ ಇತ್ತು. ಆದರೆ, ಕಾನೂನಿನಲ್ಲಿ ಲೋಪ ಆಯ್ತು. ಈಗ ಪಶು ವೈದ್ಯರು, ರೈತರು, ಸಮಾಜದ ಪ್ರಮುಖರು, ಕಾನೂನು ತಜ್ಞರಿಂದ ವರದಿ ಕೇಳಿದ್ದು ಸಮಗ್ರವಾದ ಕಾಯ್ದೆ ಒಂದನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.
ರಾತ್ರಿ ಬೀಟ್ ಗೆ ಡಿಸಿಪಿ ಶ್ರೇಣಿಯ ಅಧಿಕಾರಿಗಳ ನಿಯೋಜನೆ !
ಮಂಗಳೂರಿನಲ್ಲಿ ಗೋಡೆ ಬರಹದ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುತ್ತೇವೆ. ಈ ರೀತಿಯ ಪ್ರಕರಣ ಮರು ಕಳಿಸದಂತೆ ಕ್ರಮ ವಹಿಸಲಾಗುವುದು. ರಾತ್ರಿ ವೇಳೆಗೆ ಪೊಲೀಸ್ ಬೀಟ್ ಹೆಚ್ಚಿಸಲಾಗುವುದು. ಡಿಸಿಪಿ ರೇಂಜ್ ಅಧಿಕಾರಿಗಳನ್ನು ನೈಟ್ ಬೀಟ್ ಹಾಕಲು ಸೂಚಿಸಿದ್ದೇನೆ. ನಗರದ ಡಾರ್ಕ್ ಸ್ಪಾಟ್ ಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುವುದು. ಸ್ಮಾರ್ಟ್ ಸಿಟಿಯಡಿ 1500 ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
Law against Love Jihad will certainly be executed in Karnataka said Home Minister Bommai during his visit to Udupi.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 08:23 pm
HK News Desk
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm