ಬ್ರೇಕಿಂಗ್ ನ್ಯೂಸ್
06-05-24 02:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಬಸ್ ಚಾಲಕನಾಗಿದ್ದು, ಹಲ್ಲೆ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಮಡಿಕೇರಿಯ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್, ಭಾನುವಾರ ಸಂಜೆ ಸುಮಾರು 4 ಗಂಟೆಗೆ ಬಂಟ್ವಾಳ ಕಳೆದು ದಾಸಕೋಡಿಗೆ ತಲುಪಿದಾಗ ಎರಡು ಕಾರುಗಳಲ್ಲಿ ಯುವಕರು ಅಡ್ಡಗಟ್ಟಿದ್ದಾರೆ. ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೋಂದಣಿಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Ksrtc bus Driver assaulted for not giving way near Bantwal in Mangalore. Youths in the car stopped the Bus for not giving the way. The video of this has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm