ಬ್ರೇಕಿಂಗ್ ನ್ಯೂಸ್
06-05-24 02:51 pm Mangalore Correspondent ಕರಾವಳಿ
ಮಂಗಳೂರು, ಮೇ 6: ಪ್ರಜ್ವಲ್ ರೇವಣ್ಣ ಇಷ್ಟು ಸಣ್ಣ ಪ್ರಾಯದಲ್ಲಿ ಇಷ್ಟೆಲ್ಲಾ ಹೆಣ್ಮಕ್ಕಳನ್ನು ದುರುಪಯೋಗ ಮಾಡಿಕೊಂಡಿದ್ದಾನೆ ಅಂದ್ರೆ, ಭಯ, ಆ ಕುಟುಂಬದ ಬಗ್ಗೆ ಹೇಸಿಗೆ ಹುಟ್ಟುತ್ತದೆ. ತೆನೆಹೊತ್ತ ಮಹಿಳೆಯನ್ನು ಪಕ್ಷದ ಚಿಹ್ನೆ ಮಾಡಿಕೊಂಡು ನೂರಾರು ಮಹಿಳೆಯರ ಮಾನ ಕಳೆದಿದ್ದಾನೆ. ಪ್ರಜ್ವಲ್ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬಂದರೆ ಆತನಿಗೆ ಗುಂಡು ಹಾರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಆಗ್ರಹಿಸಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯ ಮುಂದೆ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸಾವಿರಾರು ಹೆಣ್ಮಕ್ಕಳ ಬದುಕನ್ನು ಬೀದಿಗೆ ತಂದಿದ್ದಾನೆ. ವಿಡಿಯೋ ಮಾಡಿ, ಬದುಕನ್ನೇ ಹಾಳು ಮಾಡಿದ್ದಾನೆ. ಆ ಮಹಿಳೆಯರು ಸಮಾಜದಲ್ಲಿ ಮುಖ ತೋರಿಸದ ಸ್ಥಿತಿಯಾಗಿದೆ. ಪ್ರಜ್ವಲ್ ಮನುಷ್ಯನಲ್ಲ, ಮೃಗ. ಆತನಿಗೆ ಕಠಿಣ ಶಿಕ್ಷೆಯಾಗಬೇಕು. ಆದರೆ ಸಣ್ಣ ಸಣ್ಣ ವಿಚಾರಕ್ಕೆ ಬೀದಿಗೆ ಬರುವ, ಮಹಿಳೆಯರ ಬಗ್ಗೆ ಧ್ವನಿಯೆತ್ತುವ ಬಿಜೆಪಿ ನಾಯಕರು ಎಲ್ಲಿದ್ದಾರೆ. ಶೋಭಕ್ಕ, ನಿರಾಣಿ, ಅಶೋಕ್ ಇವರೆಲ್ಲ ಯಾಕೆ ಮಾತನಾಡುತ್ತಿಲ್ಲ.



ಇಷ್ಟೊಂದು ಘೋರ ಅಪರಾಧ ಎಸಗಿದ್ದರೂ ಬಿಜೆಪಿ ನಾಯಕರು ಆ ಕುಟುಂಬದ ಪರ ನಿಂತಿದ್ದಾರೆ. ಕ್ರೂರಿಯನ್ನು ರಕ್ಷಣೆ ಮಾಡಲು ಪ್ರಧಾನಿ ಮೋದಿ ನಿಂತಿದ್ದಾರೆ. ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಬಗ್ಗೆ ಕುಮಾರಸ್ವಾಮಿ ಅಪಹಾಸ್ಯ ಮಾಡಿದ್ದರು. ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಿಸಿದ್ದರು. ಆ ಹೇಳಿಕೆ ಬಂದು ಎರಡೇ ವಾರದಲ್ಲಿ ಅವರ ಕುಟುಂಬದ ಮಗನೇ ದಾರಿ ತಪ್ಪಿದ್ದಾನೆ. ಪ್ರಜ್ವಲ್ ಎಲ್ಲಿದ್ದರೂ ಒದ್ದು ತರಬೇಕಾಗಿದೆ, ಆತನಿಗೆ ಶಿಕ್ಷೆ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ತನ್ವೀರ್ ಶಾ, ರೂಪಾ ಚೇತನ್, ಚಂದ್ರಕಲಾ ಜೋಗಿ, ಶಶಿಕಲಾ ಪದ್ಮನಾಭನ್, ಶಾಂತಲಾ ಗಟ್ಟಿ, ಗೀತಾ ಅತ್ತಾವರ, ಚಂದ್ರಕಲಾ ಡಿ. ರಾವ್, ನಮಿತಾ ಡಿ. ರಾವ್, ವಂದನಾ ಭಂಡಾರಿ, ಶಾರಿಕಾ ಪೂಜಾರಿ, ಅನಿತಾ, ವಿಲ್ಮಾ, ಡಿಂಪಲ್ ಮತ್ತಿತರರಿದ್ದರು.
Prajwal Revanna must be shot says Congress Shalet Pinto in Mangalore. He has spoilt the lives of thousands of girls. If he wins this coming lok sabha elections he must be shot she added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm