Mangalore News, Suicide: ಪ್ರೇಮ ವೈಫಲ್ಯ ; ಮಂಗಳೂರಿನ ಯುವಕ ಬಿ.ಸಿ.ರೋಡಿನಲ್ಲಿ ಆತ್ಮಹತ್ಯೆ 

07-05-24 02:34 pm       Mangalore Correspondent   ಕರಾವಳಿ

ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ. 

ಬಂಟ್ವಾಳ, ಮೇ.7: ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ. 

ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ರೂಮ್ ಮಾಡಿದ್ದ ಯುವಕ ಮೇ 6ರಂದು ರಾತ್ರಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.
ಆನ್ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. 

ಹಣ ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ‌. ಇದೇ ಕಾರಣಕ್ಕೆ ಆತ್ಮಹತ್ಯೆ ‌ಮಾಡಿಕೊಂಡಿರ ಬಹುದು ‌ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.

Mangalore Love failure, 30 year old commits suicide at lodge in Bantwal. The deceased has been identified as Prajwal from Attavar.