ಬ್ರೇಕಿಂಗ್ ನ್ಯೂಸ್
08-05-24 12:49 pm Mangalore Correspondent ಕರಾವಳಿ
ಪುತ್ತೂರು, ಮೇ 8: ಹಿರಿಯ ತುಳು ಜಾನಪದ ವಿದ್ವಾಂಸ, ಕರ್ನಾಟಕ ತುಳು ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ರಾತ್ರಿ ನಿಧನರಾದರು. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಲ್ತಾಡಿಯವರಾದ ರಾಮಕೃಷ್ಣ ಆಚಾರ್, ಪುತ್ತೂರು ಹೊರವಲಯದ ಬೆದ್ರಾಳದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಕೆಲ ಸಮಯದಿಂದ ಬೆಳ್ಳಾರೆಯ ಪೆರುವಾಜೆಯಲ್ಲಿರುವ ಮಗಳ ಮನೆಯಲ್ಲಿದ್ದರು. ಮಂಗಳವಾರ ಸಂಜೆ ಅನಾರೋಗ್ಯಕ್ಕೆ ತುತ್ತಾದ ಕಾರಣ ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಕೆಯ್ಯೂರು ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿದ್ದರು. 1994ರಲ್ಲಿ ಕರ್ನಾಟಕ ತುಳು ಅಕಾಡೆಮಿ ಸ್ಥಾಪನೆಯಾದಾಗ ಅದರ ಮೊದಲ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದರು.
ಸೇವಾ ನಿವೃತ್ತಿ ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತುಳು ಜನಪದ ಕುಣಿತಗಳ ಬಗ್ಗೆ ಇವರು ನಡೆಸಿದ ಅಧ್ಯಯನ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪ್ರದಾನವಾಗಿತ್ತು. ತುಳು ಜನಪದ, ದೈವಾರಾಧನೆ ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದ ಪಾಲ್ಡಾಡಿ ರಾಮಕೃಷ್ಣ ಆಚಾರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಳು ಜನಪದ ಬಗ್ಗೆ ಉಪನ್ಯಾಸ, ತರಬೇತಿ, ತುಳು ಲಿಪಿ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟಿದ್ದರು. ತುಳು ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಅನೇಕ ತುಳು ಕೃತಿಗಳ ಪ್ರಕಟಣೆಗೆ ಶ್ರಮಿಸಿದ್ದರು.
Dr Palthadi Ramakrishna Achar, former president of Karnataka Tulu Sahitya Academy, folk scholar, and literature teacher, breathed his last on Tuesday, May 7 at the age of 79.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm