ಬ್ರೇಕಿಂಗ್ ನ್ಯೂಸ್
08-05-24 12:49 pm Mangalore Correspondent ಕರಾವಳಿ
ಪುತ್ತೂರು, ಮೇ 8: ಹಿರಿಯ ತುಳು ಜಾನಪದ ವಿದ್ವಾಂಸ, ಕರ್ನಾಟಕ ತುಳು ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ರಾತ್ರಿ ನಿಧನರಾದರು. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಲ್ತಾಡಿಯವರಾದ ರಾಮಕೃಷ್ಣ ಆಚಾರ್, ಪುತ್ತೂರು ಹೊರವಲಯದ ಬೆದ್ರಾಳದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಕೆಲ ಸಮಯದಿಂದ ಬೆಳ್ಳಾರೆಯ ಪೆರುವಾಜೆಯಲ್ಲಿರುವ ಮಗಳ ಮನೆಯಲ್ಲಿದ್ದರು. ಮಂಗಳವಾರ ಸಂಜೆ ಅನಾರೋಗ್ಯಕ್ಕೆ ತುತ್ತಾದ ಕಾರಣ ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಕೆಯ್ಯೂರು ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿದ್ದರು. 1994ರಲ್ಲಿ ಕರ್ನಾಟಕ ತುಳು ಅಕಾಡೆಮಿ ಸ್ಥಾಪನೆಯಾದಾಗ ಅದರ ಮೊದಲ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದರು.
ಸೇವಾ ನಿವೃತ್ತಿ ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತುಳು ಜನಪದ ಕುಣಿತಗಳ ಬಗ್ಗೆ ಇವರು ನಡೆಸಿದ ಅಧ್ಯಯನ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪ್ರದಾನವಾಗಿತ್ತು. ತುಳು ಜನಪದ, ದೈವಾರಾಧನೆ ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದ ಪಾಲ್ಡಾಡಿ ರಾಮಕೃಷ್ಣ ಆಚಾರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಳು ಜನಪದ ಬಗ್ಗೆ ಉಪನ್ಯಾಸ, ತರಬೇತಿ, ತುಳು ಲಿಪಿ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟಿದ್ದರು. ತುಳು ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಅನೇಕ ತುಳು ಕೃತಿಗಳ ಪ್ರಕಟಣೆಗೆ ಶ್ರಮಿಸಿದ್ದರು.
Dr Palthadi Ramakrishna Achar, former president of Karnataka Tulu Sahitya Academy, folk scholar, and literature teacher, breathed his last on Tuesday, May 7 at the age of 79.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm