ಬ್ರೇಕಿಂಗ್ ನ್ಯೂಸ್
03-12-20 02:42 pm Mangalore Correspondent ಕರಾವಳಿ
ಉಳ್ಳಾಲ: ಡಿ. 3: ಸೋಮೇಶ್ವರ ಗ್ರಾಮದ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ತುಳು ಭಜನಾ ಸ್ಪರ್ಧೆ ತಂಬೂರಿ - 2020 ಡಿ. 6 ಹಾಗೂ 13ರಂದು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಗುರುವಾರ ತೊಕ್ಕೊಟ್ಟಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಪರ್ಧೆಯು ಪುರುಷರು, ಮಹಿಳೆಯರು, ಬಾಲಕರು ಹಾಗೂ ಬಾಲಕಿಯರು ಸೇರಿದಂತೆ ಮೂರು ವಿಭಾಗಗಳಲ್ಲಿ ನಡೆಯಲಿದ್ದು ಪುರುಷರ ವಿಭಾಗದ ಸ್ಪರ್ಧೆಯು ಡಿ. 6ಕ್ಕೆ ನಡೆಯಲಿದ್ದು, ಮಹಿಳೆಯರು, ಬಾಲಕರು ಹಾಗೂ ಬಾಲಕಿಯರ ವಿಭಾಗದ ಸ್ಪರ್ಧೆಯು ಡಿ.13ರಂದು ನಡೆಯಲಿದೆ ಎಂದರು.
ಮೂರು ವಿಭಾಗಗಳಿಗೂ ಪ್ರಶಸ್ತಿ ವಿತರಣೆ ಸಮಾರಂಭವು ಡಿ.13ರಂದು ಸಂಜೆ 6ಕ್ಕೆ ನಡೆಯಲಿದ್ದು ಪ್ರತಿ ತಂಡಕ್ಕೂ 20 ನಿಮಿಷ ಕಾಲಾವಧಿ ನೀಡಲಾಗಿದೆ. ಮೂರೂ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಫಲಕ, ಪ್ರಶಸ್ತಿ ಪತ್ರ ಸೇರಿದಂತೆ ಭಾಗವಹಿಸಿದ ಎಲ್ಲ ತಂಡಗಳಿಗೂ ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಗೌರವಿಸಲಾಗುವುದು. ವೈಯಕ್ತಿಕವಾಗಿ ಹಾರ್ಮೋನಿಯಂ ವಾದಕ, ತಬಲಾ ವಾದಕ ಹಾಗೂ ಉತ್ತಮ ಭಜಕ ಪ್ರಶಸ್ತಿ ನೀಡಲಾಗುವುದು ಎಂದರು.
ಡಿ. 6ರಂದು ಬೆಳಗ್ಗೆ 8.30ಕ್ಕೆ ಕುಂಪಲ ಶಾಲಾ ಮೈದಾನದಿಂದ ಭಜಕರ ವರ್ಣರಂಜಿತ ಶೋಭಾಯಾತ್ರೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಎಲ್ಲರೂ ಸಮವಸ್ತ್ರಧಾರಿಗಳಾಗಿ ಭಾಗವಹಿಸಲಿದ್ದು ವಿಶೇಷ ಶೋಭಾಯಾತ್ರೆ ನಡೆಯಲಿದೆ. ತುಳುನಾಡಿನಲ್ಲಿಯೇ ಅಪೂರ್ವ ಆಗಿರುವ ಈ ಭಜನಾ ಸ್ಪರ್ಧೆಗೆ ಈಗಾಗಲೇ 65ಕ್ಕೂ ಅಧಿಕ ತಂಡಗಳು ನೊಂದಣಿ ಮಾಡಿರುತ್ತದೆ.
ತಂಬೂರಿ- 2020ರ ಸ್ಪರ್ಧೆಯನ್ನು ಡಿ.6 ರಂದು ಜಿಲ್ಲಾ ಉಸ್ತುವಾರಿ ಸಚಿವರು, ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದು, ಜಿಲ್ಲೆಯ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಡಿ.13ರ ಮಹಿಳಾ ಮತ್ತು ಮಕ್ಕಳ ಭಜನಾ ಸ್ಪರ್ಧೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದರಾದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಹಲವು ಗಣ್ಯರು ಭಾಗವಹಿಸುವರು. ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಂಪಲ, ಉಪಾಧ್ಯಕ್ಷ ಚಂದ್ರಶೇಖರ್ ಬಿ.ಜೆ, ಆಡಳಿತ ಮಂಡಳಿ ಸದಸ್ಯರುಗಳಾದ ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಕಿಶೋರ್ ಡಿ.ಕೆ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎಸ್. ಕುಂಪಲ ಉಪಸ್ಥಿತರಿದ್ದರು.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm