ಬ್ರೇಕಿಂಗ್ ನ್ಯೂಸ್
08-05-24 03:20 pm Mangalore Correspondent ಕರಾವಳಿ
ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಯ್ ಕೈ ನಡೆದಿದ್ದು ತಳ್ಳಾಟ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೋ ಚಾಲಕರು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆಕ್ಷೇಪ ಕೇಳಿಬಂದಿದೆ.
ಸೆಂಟ್ರಲ್ ರೈಲ್ವೇ ನಿಲ್ದಾಣದ ಹೊರಗೆ ವಾಗ್ವಾದ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ಬೆಳಗ್ಗೆ ಚೆನ್ನೈನಿಂದ ದಂಪತಿ ಬಂದಿದ್ದು, ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯಲು ಇಬ್ಬರು ಬಂದಿದ್ದರು. ರೈಲ್ವೇ ನಿಲ್ದಾಣದಲ್ಲಿ ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನ ಪಾರ್ಕಿಂಗ್ ಮಾಡಬೇಕು. ನಿಲ್ದಾಣದ ಮುಂದಿನ ಮುಖ್ಯ ಗೇಟ್ ಬಳಿ ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಅನುಮತಿಯಿದ್ದು ಖಾಲಿ ವಾಹನ ತರುವುದಕ್ಕೆ ಅವಕಾಶ ಇಲ್ಲ.





ಇದೇ ವಿಚಾರದಲ್ಲಿ ರೈಲು ಪ್ರಯಾಣಿಕರನ್ನು ಕರೆದೊಯ್ಯಲು ಬಂದಿದ್ದ ಇಬ್ಬರು ಮತ್ತು ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಎಂಬ ವ್ಯಕ್ತಿ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಪರವಾಗಿ ಆಟೋರಿಕ್ಷಾ ಚಾಲಕರು ಮಧ್ಯಪ್ರವೇಶಿಸಿದ್ದಾರೆ. ಆನಂತರ ವಾಗ್ವಾದ ತಾರಕಕ್ಕೇರಿದ್ದು, ಪ್ರಯಾಣಿಕರ ಜೊತೆಗೆ ಆಟೋ ಚಾಲಕರು ಜಗಳ ನಡೆಸಿದ್ದಾರೆ. ಹೊಡೆದಾಟದ ವಿಡಿಯೋ ಸಾರ್ವಜನಿಕರ ಮೊಬೈಲಿನಲ್ಲಿ ಸೆರೆಯಾಗಿದೆ.
ಈ ಬಗ್ಗೆ ಪೊಲೀಸ್ - ಮಾಧ್ಯಮ ವಾಟ್ಸಪ್ ಗ್ರೂಪಿನಲ್ಲಿ ಪ್ರತಿಕ್ರಿಯೆ ಹಾಕಿರುವ ಮಂಗಳೂರು ಪೊಲೀಸ್ ಕಮಿಷನರ್, ಆಟೋ ಚಾಲಕರ ಗುರುತು ಪತ್ತೆಹಚ್ಚಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲನೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Fight between auto drivers and passenger go viral in #Mangalore #railwaystation pic.twitter.com/XxbCHbk94e
— Headline Karnataka (@hknewsonline) May 8, 2024
Fight between auto drivers and passenger go viral in Mangalore railway station over parking issues.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm