ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.
ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
17-07-25 04:50 pm
Bangalore Correspondent
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am