ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm