ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm