ಬ್ರೇಕಿಂಗ್ ನ್ಯೂಸ್
10-05-24 12:39 pm Mangalore Correspondent ಕರಾವಳಿ
ಉಳ್ಳಾಲ, ಮೇ.10: ನಿಯಂತ್ರಣ ತಪ್ಪಿದ ಕಾರೊಂದು ಚುರುಮುರಿ ವ್ಯಾಪಾರದ ಗೂಡಂಗಡಿಗೆ ಢಿಕ್ಕಿ ಹೊಡೆದು ಅಂಗಡಿಯನ್ನ ಉಡೀಸ್ ಮಾಡಿದ್ದಲ್ಲದೆ, ಮರಕ್ಕೆ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು , ಕಾರಿನ ಧಾವಂತಕ್ಕೆ ಬೀದಿ ನಾಯಿಯೊಂದು ಬಲಿಯಾದ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡೇಶ್ವರದ ಮೂವರು ಯುವಕರು ನಿನ್ನೆ ಮಧ್ಯರಾತ್ರಿ 12.30 ರ ವೇಳೆಗೆ ಮಂಗಳೂರಿನಿಂದ ಮಂಜೇಶ್ವರದ ಹೊಸಂಗಡಿಗೆ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ಚುರುಮುರಿ ಗೂಡಂಗಡಿಗೆ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗೂಡಂಗಡಿ ದೂರಕ್ಕೆ ಎಸೆಯಲ್ಪಟ್ಟಿದೆ. ನಂತರ ಕಾರು ಅಲ್ಲೇ ಇದ್ದ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಕಾರಿನ ಸಹ ಸವಾರನೋರ್ವ ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.
ಘಟನೆಯಿಂದ ತೊಕ್ಕೊಟ್ಟು ನಿವಾಸಿ ಗಣೇಶ್ ಎಂಬವರ ಚುರುಮುರಿ ಅಂಗಡಿ ಸಂಪೂರ್ಣ ನಜ್ಜು ಗುಜ್ಜಾಗಿ ಸುಮಾರು ಮೂವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಒಂದು ವೇಳೆ ಹಗಲಲ್ಲಿ ಈ ಘಟನೆ ನಡೆದಿದ್ದರೆ ಚುರುಮುರಿ ಅಂಗಡಿಯ ಗಣೇಶ್ ಅವರ ಪ್ರಾಣ ಉಳಿಯುತ್ತಿರಲಿಲ್ಲ. ಕಾರಿನ ಧಾವಂತಕ್ಕೆ ಬೀದಿಯಲ್ಲಿದ್ದ ಶ್ವಾನವೊಂದು ಬಲಿಯಾಗಿದೆ. ಟ್ರಾಫಿಕ್ ಪೊಲೀಸರು ಸಮರ್ಪಕ ತನಿಖೆ ನಡೆಸಿ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Car accident at Thokotuu, rams shops, dog killed. Three Youths from Pandeshwar were going towards Manjeshwara in the swift car. As the car lost control he rammed a petty shop and then killed a dog.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm