ಬ್ರೇಕಿಂಗ್ ನ್ಯೂಸ್
10-05-24 12:39 pm Mangalore Correspondent ಕರಾವಳಿ
ಉಳ್ಳಾಲ, ಮೇ.10: ನಿಯಂತ್ರಣ ತಪ್ಪಿದ ಕಾರೊಂದು ಚುರುಮುರಿ ವ್ಯಾಪಾರದ ಗೂಡಂಗಡಿಗೆ ಢಿಕ್ಕಿ ಹೊಡೆದು ಅಂಗಡಿಯನ್ನ ಉಡೀಸ್ ಮಾಡಿದ್ದಲ್ಲದೆ, ಮರಕ್ಕೆ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು , ಕಾರಿನ ಧಾವಂತಕ್ಕೆ ಬೀದಿ ನಾಯಿಯೊಂದು ಬಲಿಯಾದ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡೇಶ್ವರದ ಮೂವರು ಯುವಕರು ನಿನ್ನೆ ಮಧ್ಯರಾತ್ರಿ 12.30 ರ ವೇಳೆಗೆ ಮಂಗಳೂರಿನಿಂದ ಮಂಜೇಶ್ವರದ ಹೊಸಂಗಡಿಗೆ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ಚುರುಮುರಿ ಗೂಡಂಗಡಿಗೆ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗೂಡಂಗಡಿ ದೂರಕ್ಕೆ ಎಸೆಯಲ್ಪಟ್ಟಿದೆ. ನಂತರ ಕಾರು ಅಲ್ಲೇ ಇದ್ದ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಕಾರಿನ ಸಹ ಸವಾರನೋರ್ವ ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.





ಘಟನೆಯಿಂದ ತೊಕ್ಕೊಟ್ಟು ನಿವಾಸಿ ಗಣೇಶ್ ಎಂಬವರ ಚುರುಮುರಿ ಅಂಗಡಿ ಸಂಪೂರ್ಣ ನಜ್ಜು ಗುಜ್ಜಾಗಿ ಸುಮಾರು ಮೂವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಒಂದು ವೇಳೆ ಹಗಲಲ್ಲಿ ಈ ಘಟನೆ ನಡೆದಿದ್ದರೆ ಚುರುಮುರಿ ಅಂಗಡಿಯ ಗಣೇಶ್ ಅವರ ಪ್ರಾಣ ಉಳಿಯುತ್ತಿರಲಿಲ್ಲ. ಕಾರಿನ ಧಾವಂತಕ್ಕೆ ಬೀದಿಯಲ್ಲಿದ್ದ ಶ್ವಾನವೊಂದು ಬಲಿಯಾಗಿದೆ. ಟ್ರಾಫಿಕ್ ಪೊಲೀಸರು ಸಮರ್ಪಕ ತನಿಖೆ ನಡೆಸಿ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Car accident at Thokotuu, rams shops, dog killed. Three Youths from Pandeshwar were going towards Manjeshwara in the swift car. As the car lost control he rammed a petty shop and then killed a dog.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm