ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm