ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm