ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm