ಬ್ರೇಕಿಂಗ್ ನ್ಯೂಸ್
10-05-24 10:16 pm Mangalore Correspondent ಕರಾವಳಿ
ಪುತ್ತೂರು, ಮೇ.10: ಕುಡಿತದ ಚಟಕ್ಕೆ ಬಿದ್ದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು ಪೊಲೀಸರು ತಾಯಿ ಮೇಲೆಯೇ ಶಂಕೆ ವ್ಯಕ್ತಪಡಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಬೆಟ್ಟಂಪಾಡಿಯ ಪಾರೆ ಎಂಬಲ್ಲಿ ಘಟನೆ ನಡೆದಿದ್ದು ಚೇತನ್ (33) ಸಾವನ್ನಪ್ಪಿದ ಯುವಕ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪುತ್ತೂರು ಪೊಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ. ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ (ಮೇ 9) ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್, ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಕುರಿತು ಯೂಸುಫ್, ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಬಳಿಕ ಯೂಸುಫ್ ಮನೆಗೆ ಬಂದ ಚೇತನ್ ತಾಯಿ, ನಾಯಿಯನ್ನು ಕಟ್ಟುವ ಸಂಕೋಲೆಯನ್ನು ತಂದು ಚೇತನ್ ಸೊಂಟಕ್ಕೆ ಹಾಕಿ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಮನೆಗೆ ಎಳೆದೊಯ್ದಿದ್ದರು.
ಯುವಕನನ್ನು ಎಳೆಯುತ್ತಿದ್ದ ಸಮಯದಲ್ಲಿ ಕುತ್ತಿಗೆಗೆ ಸುತ್ತಿಕೊಂಡಿದ್ದ ಸಂಕೋಲೆ ಬಿಗಿದು ಚೇತನ್ ಸಾವನ್ನಪ್ಪಿರುವ ಶಂಕೆ ಎದುರಾಗಿದೆ. ಶವ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿಗೆ ತರಲಾಗಿತ್ತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur 33 year old dead under suspicious circumstances, three including mother taken to police custody
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm