ಬ್ರೇಕಿಂಗ್ ನ್ಯೂಸ್
14-05-24 10:08 pm Mangalore Correspondent ಕರಾವಳಿ
ಮಂಗಳೂರು, ಮೇ.14: ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳನ್ನು ರಾಷ್ಟ್ರೀಯ ಪಕ್ಷಗಳು ಸಂಪೂರ್ಣ ಕಡೆಗಣಿಸಿವೆ. ಅಭ್ಯರ್ಥಿ ಆಯ್ಕೆಯಲ್ಲಿ ಈ ಭಾಗದವರಿಗೆ ಪ್ರಾತಿನಿಧ್ಯ ನೀಡದೆ ನಿರ್ಲಕ್ಷ್ಯ ಮಾಡಿವೆ. ಹೀಗಾಗಿ ಕರಾವಳಿ ಭಾಗದ ಶಿಕ್ಷಕರ ಧ್ವನಿಯಾಗಲು ಬಯಸುತ್ತೇನೆ. ಶಿಕ್ಷಕರ ಸ್ವಾಭಿಮಾನದ ಪ್ರತೀಕವಾಗಿ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಂಗಳೂರು ವಿ.ವಿ. ಮಾಜಿ ಸಿಂಡಿಕೇಟ್ ಸದಸ್ಯ, ಸಹಕಾರ ಭಾರತಿ ಮುಖಂಡ ಎಸ್.ಆರ್. ಹರೀಶ್ ಆಚಾರ್ಯ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರು ತಮ್ಮ ವೃತ್ತಿ ಸಂಬಂಧವಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳನ್ನು ಸರಕಾರದ ಮುಂದಿಡಲು, ಶಿಕ್ಷಕರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತಲು ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಮೇ 15ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.
ಎಬಿವಿಪಿ ಮತ್ತು ಸಹಕಾರ ಭಾರತಿಯಲ್ಲಿ ಸುದೀರ್ಘ ಅವಧಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ಹಾಗಂತ, ಯಾವುದೇ ಪಕ್ಷದ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿಲ್ಲ. ಬದಲಾಗಿ ಯಾವುದೇ ಪಕ್ಷದ ಸಹಕಾರ ಬಯಸದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು. ನಿಮ್ಮ ಸ್ಪರ್ಧೆಯಿಂದ ಪಕ್ಷದಲ್ಲಿ ತೊಡಕಾಗಲ್ಲವೇ ಎಂಬ ಪ್ರಶ್ನೆಗೆ, ನನ್ನ ಸ್ಪರ್ಧೆಯ ಕುರಿತು ಬಿಜೆಪಿ ಹಿರಿಯ ಮುಖಂಡರ ಬಳಿ ಹಿಂದೆಯೇ ಹೇಳಿದ್ದೇನೆ. ಕೆಲವು ತಿಂಗಳ ಹಿಂದೆಯೇ ಕ್ಷೇತ್ರ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ. ಶಿಕ್ಷಕರು ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆ, ಸವಾಲುಗಳನ್ನು ಅರಿತಿದ್ದೇನೆ. ಕರಾವಳಿ ಮತ್ತು ಕೊಡಗು ಜಿಲ್ಲೆಯ ಶಿಕ್ಷಕರು ನನ್ನ ಪರವಾಗಿ ಮತ ಚಲಾಯಿಸುತ್ತಾರೆಂಬ ಭರವಸೆ ಇದೆ ಎಂದರು.
ಶಿಕ್ಷಣ ಕ್ಷೇತ್ರದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಆಳುವ ಸರ್ಕಾರದಿಂದ ಕಡೆಗಣನೆ ಆಗುತ್ತಿದ್ದು ಸಮಸ್ಯೆಗಳ ಸರಮಾಲೆಯಿಂದಾಗಿ ಗೊಂದಲದ ಗೂಡಾಗಿದೆ. ನಾವು ಆಯ್ಕೆ ಮಾಡಿದ ಪ್ರತಿನಿಧಿಗಳು ನಮ್ಮ ಕೈಗೆಟುಕವಂತಿರಬೇಕು. ಸಮಸ್ಯೆಗಳಿಗೆ ಧ್ವನಿಯಾಗುವ ಆಸಕ್ತಿ ಹೊಂದಿರಬೇಕು ಎನ್ನುವ ಭಾವನೆ ಶಿಕ್ಷಕರಲ್ಲಿದೆ. ಹಾಗಾಗಿ, ಈ ಬಾರಿ ಬದಲಾವಣೆ ಕೂಗು ಕೇಳಿಬರುತ್ತಿದೆ. ಶಿಕ್ಷಕ ವೃಂದ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿರುವುದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ತಿಳಿದುಕೊಂಡಿದ್ದೇನೆ.
ಕಳೆದ 20 ವರ್ಷಗಳಿಂದ ಈ ಭಾಗದಲ್ಲಿ ವಿದ್ಯಾರ್ಥಿ ಮುಖಂಡನಾಗಿ ಕೆಲಸ ಮಾಡಿದ್ದೇನೆ. ಅಧ್ಯಾಪಕರ ಸಂಘಟನೆಗಳ ಜೊತೆಗೂ ನಿರಂತರ ಸಂಪರ್ಕ ಇಟ್ಟುಕೊಂಡಿದ್ದೇನೆ. ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯನಾಗಿಯೂ ಸೇವೆ ಸಲ್ಲಿಸಿ, ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕ ಸಮುದಾಯದ ಹಲವಾರು ಸಮಸ್ಯೆಗಳಿಗೆ ಧ್ವನಿಯಾಗಿದ್ದೇನೆ. ಶಿಕ್ಷಕ ಸಮುದಾಯದ ಪರವಾಗಿ ಸಮರ್ಥ ರೀತಿಯ ಧ್ವನಿಯಾಗಲು ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಡಾ.ರಾಜಮೋಹನ್ ರಾವ್, ಜ್ಯೋತಿ ರೈ, ನಿತೀಶ್ ಸಾಲ್ಯಾನ್, ಜಿತಿನ್ ಜಿಜೋ ಉಪಸ್ಥಿತರಿದ್ದರು.
Vidhan Parisad election, competing as a symbol of teacher's self esteem says Harish Acharya in Mangalore
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm