ಬ್ರೇಕಿಂಗ್ ನ್ಯೂಸ್
16-05-24 12:37 pm Mangalore Correspondent ಕರಾವಳಿ
ಪುತ್ತೂರು, ಮೇ.16: ಜ್ವರ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ನಡುವೆ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಕೃಷ್ಣಪ್ಪ ಅವರು ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗಡ್ಡೆ ಇದ್ದು ಅದನ್ನು ತೆಗೆಯಬೇಕೆಂದು ಹೇಳಿದ್ದಾರೆ.
ಗಡ್ಡೆ ತೆಗೆಯಲು ಆಪರೇಷನ್ ಮಾಡಿಸಬೇಕು, ಅದಕ್ಕಾಗಿ ಕೃಷ್ಣಪ್ಪ ಗೌಡ ಅವರ ಪತ್ನಿ ಸರೋಜಿನಿ ಮತ್ತು ಅತ್ತಿಗೆಯ ಸಹಿ ಹಾಕಿಸಿಕೊಂಡ ವೈದ್ಯರು ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಅನಸ್ತೇಶಿಯಾ ಕೊಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಕೃಷ್ಣಪ್ಪ ಗೌಡ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯ ಮತ್ತು ಎಡವಟ್ಟಿನಿಂದಲೇ ಕೃಷ್ಣಪ್ಪ ಸಾವನಪ್ಪಿದ್ದಾರೆ ಎಂದು ರೊಚ್ಚಿಗೆದ್ದ ಸಂಬಂಧಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು, ವೈದ್ಯರ ಎಡವಟ್ಟಿನಿಂದಲೇ ಸಾವು ಸಂಭವಿಸಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
Puttur man dies after operation, doctors negligence, people protest. The deceased has been identified as Krishnappa Gowda. He was admitted over fever.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm