ಬ್ರೇಕಿಂಗ್ ನ್ಯೂಸ್
16-05-24 12:37 pm Mangalore Correspondent ಕರಾವಳಿ
ಪುತ್ತೂರು, ಮೇ.16: ಜ್ವರ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ನಡುವೆ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಕೃಷ್ಣಪ್ಪ ಅವರು ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗಡ್ಡೆ ಇದ್ದು ಅದನ್ನು ತೆಗೆಯಬೇಕೆಂದು ಹೇಳಿದ್ದಾರೆ.
ಗಡ್ಡೆ ತೆಗೆಯಲು ಆಪರೇಷನ್ ಮಾಡಿಸಬೇಕು, ಅದಕ್ಕಾಗಿ ಕೃಷ್ಣಪ್ಪ ಗೌಡ ಅವರ ಪತ್ನಿ ಸರೋಜಿನಿ ಮತ್ತು ಅತ್ತಿಗೆಯ ಸಹಿ ಹಾಕಿಸಿಕೊಂಡ ವೈದ್ಯರು ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಅನಸ್ತೇಶಿಯಾ ಕೊಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಕೃಷ್ಣಪ್ಪ ಗೌಡ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯ ಮತ್ತು ಎಡವಟ್ಟಿನಿಂದಲೇ ಕೃಷ್ಣಪ್ಪ ಸಾವನಪ್ಪಿದ್ದಾರೆ ಎಂದು ರೊಚ್ಚಿಗೆದ್ದ ಸಂಬಂಧಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು, ವೈದ್ಯರ ಎಡವಟ್ಟಿನಿಂದಲೇ ಸಾವು ಸಂಭವಿಸಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
Puttur man dies after operation, doctors negligence, people protest. The deceased has been identified as Krishnappa Gowda. He was admitted over fever.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm