ಬ್ರೇಕಿಂಗ್ ನ್ಯೂಸ್
19-05-24 04:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ ನೈಜ ಫಲಿತಾಂಶ ಬಂದಿದ್ದು, ಮುಂದಿನ ಅಧಿವೇಶನದಲ್ಲಿ ಸಾಮೂಹಿಕ ನಕಲು ಬಗ್ಗೆ ಕ್ರಮ ಜರುಗಿಸಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ವಿಧಾನ ಪರಿಷತ್ ಚುನಾವಣೆ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಆಗುತ್ತಿರುವ ಶಂಕೆಯಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಕ್ಯಾಮೆರಾ ಅಳವಡಿಸಬೇಕೆಂದು ಪರಿಷತ್ತಿನಲ್ಲಿ ಆಗ್ರಹ ಮಾಡಿದ್ದೆವು. ಹಾಗಾಗಿ, ಈ ಬಾರಿ ಸರಕಾರ ಪರೀಕ್ಷಾ ಹಾಲ್ ಗಳಲ್ಲಿ ಸಿಸಿ ಕ್ಯಾಮೆರಾ ಇಟ್ಟು ನಿಗಾ ವಹಿಸಲಾಗಿತ್ತು. ಇದರಿಂದಾಗಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಇದು ಶಾಲಾ ಮಕ್ಕಳ ಕಲಿಕೆಯ ನೈಜ ಫಲಿತಾಂಶವನ್ನು ತೋರಿಸಿದೆ ಎಂದು ಹೇಳಿದರು.
ಸಾಮೂಹಿಕ ನಕಲು ಆಗುತ್ತಿರುವ ಬಗ್ಗೆ ಇತ್ತೀಚೆಗೆ ಶಾಸಕ ಪ್ರದೀಪ್ ಈಶ್ವರ್ ಕೂಡ ಹೇಳಿದ್ದರು. ನೀವು ಯಾಕೆ ಇದರ ಬಗ್ಗೆ ಸರಕಾರದಿಂದ ತನಿಖೆ ಮಾಡಿಸಿಲ್ಲ ಎಂದು ಕೇಳಿದ ಪ್ರಶ್ನೆಗೆ, ನಾವು ವಿಧಾನ ಪರಿಷತ್ತಿನಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದರಿಂದ ಈ ಸಲ ಕಟ್ಟುನಿಟ್ಟು ಆಗಿದೆ. ನೈಜ ಫಲಿತಾಂಶ ಬಂದಿದೆ ಎಂದರು.
ನೀವು ಆರು ವರ್ಷಗಳಿಂದ ಶಾಸಕರಾಗಿದ್ದೀರಿ, ಈಗ ಕಾಂಗ್ರೆಸ್ ಸರಕಾರ ಬಂದ ಬಳಿಕ ನೀವು ಈ ಒತ್ತಾಯ ಮಾಡಿದ್ದೇ ಎಂದು ಪ್ರಶ್ನೆ ಹಾಕಿದ್ದಕ್ಕೆ, ಅವರಲ್ಲಿ ಉತ್ತರ ಇರಲಿಲ್ಲ. ಏಳೆಂಟು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಏರಿಳಿತ ಆಗಿದೆ, ಚಿಕ್ಕೋಡಿ, ಚಿತ್ರದುರ್ಗ ಪ್ರಥಮ ಸ್ಥಾನಿಯಾದ ಉದಾಹರಣೆ ಇದೆ, ಅಲ್ಲಿ ಸಾಮೂಹಿಕ ನಕಲು ಮಾಡಿದ್ದರ ಬಗ್ಗೆ ಕ್ರಮ ಆಗಬೇಕಲ್ವಾ ಎಂದು ಪ್ರಶ್ನೆ ಮಾಡಿದಾಗ, ನಾವು ಅದರ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇವೆ. ಯಾರು ತಪ್ಪಿತಸ್ಥರಿದ್ದಾರೋ, ಅವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರಿನಲ್ಲಿ ನೀವು ಬಿಜೆಪಿ ವಿರುದ್ಧ ಕಾಂಗ್ರೆಸಿಗೆ ಓಟ್ ಹಾಕುವಂತೆ ಬಹಿರಂಗ ಹೇಳಿಕೆ ಕೊಟ್ಟಿದ್ದೀರಲ್ಲಾ, ಈ ಬಾರಿ ಅದು ತೊಂದರೆ ಆಗಲ್ಲವೇ. ಬಿಜೆಪಿ ಕಾರ್ಯಕರ್ತರು ವಿರೋಧಿಸುತ್ತಿದ್ದಾರಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಪ್ರಶ್ನೆಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಆ ಬಗ್ಗೆ ಬಿಜೆಪಿ ನಾಯಕರ ಜೊತೆ ಕ್ಲಾರಿಫೈ ಮಾಡಿಕೊಂಡಿದ್ದೇನೆ. ಈಗ ಹಳೆಯದನ್ನು ಕೆದಕುವುದಕ್ಕೆ ಹೋಗಲ್ಲ. ಈ ಹೊತ್ತಿನಲ್ಲಿ ಅದೆಲ್ಲ ಅನಗತ್ಯ ಎಂದರು.
Mass Copying in North Karnataka in SSSC Exam, MLC Bhoje Gowda in Mangalore
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm