ಬ್ರೇಕಿಂಗ್ ನ್ಯೂಸ್
19-05-24 04:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ ನೈಜ ಫಲಿತಾಂಶ ಬಂದಿದ್ದು, ಮುಂದಿನ ಅಧಿವೇಶನದಲ್ಲಿ ಸಾಮೂಹಿಕ ನಕಲು ಬಗ್ಗೆ ಕ್ರಮ ಜರುಗಿಸಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ವಿಧಾನ ಪರಿಷತ್ ಚುನಾವಣೆ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಆಗುತ್ತಿರುವ ಶಂಕೆಯಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಕ್ಯಾಮೆರಾ ಅಳವಡಿಸಬೇಕೆಂದು ಪರಿಷತ್ತಿನಲ್ಲಿ ಆಗ್ರಹ ಮಾಡಿದ್ದೆವು. ಹಾಗಾಗಿ, ಈ ಬಾರಿ ಸರಕಾರ ಪರೀಕ್ಷಾ ಹಾಲ್ ಗಳಲ್ಲಿ ಸಿಸಿ ಕ್ಯಾಮೆರಾ ಇಟ್ಟು ನಿಗಾ ವಹಿಸಲಾಗಿತ್ತು. ಇದರಿಂದಾಗಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಇದು ಶಾಲಾ ಮಕ್ಕಳ ಕಲಿಕೆಯ ನೈಜ ಫಲಿತಾಂಶವನ್ನು ತೋರಿಸಿದೆ ಎಂದು ಹೇಳಿದರು.
ಸಾಮೂಹಿಕ ನಕಲು ಆಗುತ್ತಿರುವ ಬಗ್ಗೆ ಇತ್ತೀಚೆಗೆ ಶಾಸಕ ಪ್ರದೀಪ್ ಈಶ್ವರ್ ಕೂಡ ಹೇಳಿದ್ದರು. ನೀವು ಯಾಕೆ ಇದರ ಬಗ್ಗೆ ಸರಕಾರದಿಂದ ತನಿಖೆ ಮಾಡಿಸಿಲ್ಲ ಎಂದು ಕೇಳಿದ ಪ್ರಶ್ನೆಗೆ, ನಾವು ವಿಧಾನ ಪರಿಷತ್ತಿನಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದರಿಂದ ಈ ಸಲ ಕಟ್ಟುನಿಟ್ಟು ಆಗಿದೆ. ನೈಜ ಫಲಿತಾಂಶ ಬಂದಿದೆ ಎಂದರು.
ನೀವು ಆರು ವರ್ಷಗಳಿಂದ ಶಾಸಕರಾಗಿದ್ದೀರಿ, ಈಗ ಕಾಂಗ್ರೆಸ್ ಸರಕಾರ ಬಂದ ಬಳಿಕ ನೀವು ಈ ಒತ್ತಾಯ ಮಾಡಿದ್ದೇ ಎಂದು ಪ್ರಶ್ನೆ ಹಾಕಿದ್ದಕ್ಕೆ, ಅವರಲ್ಲಿ ಉತ್ತರ ಇರಲಿಲ್ಲ. ಏಳೆಂಟು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಏರಿಳಿತ ಆಗಿದೆ, ಚಿಕ್ಕೋಡಿ, ಚಿತ್ರದುರ್ಗ ಪ್ರಥಮ ಸ್ಥಾನಿಯಾದ ಉದಾಹರಣೆ ಇದೆ, ಅಲ್ಲಿ ಸಾಮೂಹಿಕ ನಕಲು ಮಾಡಿದ್ದರ ಬಗ್ಗೆ ಕ್ರಮ ಆಗಬೇಕಲ್ವಾ ಎಂದು ಪ್ರಶ್ನೆ ಮಾಡಿದಾಗ, ನಾವು ಅದರ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇವೆ. ಯಾರು ತಪ್ಪಿತಸ್ಥರಿದ್ದಾರೋ, ಅವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರಿನಲ್ಲಿ ನೀವು ಬಿಜೆಪಿ ವಿರುದ್ಧ ಕಾಂಗ್ರೆಸಿಗೆ ಓಟ್ ಹಾಕುವಂತೆ ಬಹಿರಂಗ ಹೇಳಿಕೆ ಕೊಟ್ಟಿದ್ದೀರಲ್ಲಾ, ಈ ಬಾರಿ ಅದು ತೊಂದರೆ ಆಗಲ್ಲವೇ. ಬಿಜೆಪಿ ಕಾರ್ಯಕರ್ತರು ವಿರೋಧಿಸುತ್ತಿದ್ದಾರಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಪ್ರಶ್ನೆಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಆ ಬಗ್ಗೆ ಬಿಜೆಪಿ ನಾಯಕರ ಜೊತೆ ಕ್ಲಾರಿಫೈ ಮಾಡಿಕೊಂಡಿದ್ದೇನೆ. ಈಗ ಹಳೆಯದನ್ನು ಕೆದಕುವುದಕ್ಕೆ ಹೋಗಲ್ಲ. ಈ ಹೊತ್ತಿನಲ್ಲಿ ಅದೆಲ್ಲ ಅನಗತ್ಯ ಎಂದರು.
Mass Copying in North Karnataka in SSSC Exam, MLC Bhoje Gowda in Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm