ಬ್ರೇಕಿಂಗ್ ನ್ಯೂಸ್
19-05-24 08:36 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 19: ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದಲ್ಲಿಗೆ ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಒಂದು ಹಿಟಾಚಿ, ಟ್ರಾಕ್ಟರ್ ಒಂದು, ಜೀವಂತ ಮದ್ದುಗುಂಡು 4, ಬಳಕೆಯಾಗಿರುವ 4 ಮದ್ದುಗುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಸ್ಥಳದಲ್ಲಿದ್ದ ಕಾರ್ಮಿಕರನ್ನು ವಿಚಾರಿಸಿದಾಗ, ಅಕ್ರಮ ಗಣಿಗಾರಿಕೆಯನ್ನು ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿದ್ದ ಸ್ಫೋಟಕಗಳನ್ನು ವಶಕ್ಕೆ ಪಡೆದು ಆರೋಪಿಗಳಿಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 9ಬಿ(1)ಬಿ ಸ್ಫೋಟಕ ಕಾಯ್ದೆ 1884ರ ಕಲಂ ಎಕ್ಸ್ ಪ್ಲೋಸಿವ್ ಸಬ್ ಸ್ಟೇನ್ಸ್ ಏಕ್ಟ್ -1908 ರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಫೋಟಕ ಹೊಂದಿದ್ದ ಪ್ರಕರಣ ಜಾಮೀನು ರಹಿತ ಕಾಯ್ದೆಯಾಗಿದ್ದರಿಂದ ಆರೋಪಿ ಯುವಮೋರ್ಚಾ ಮುಖಂಡ ಶಶಿರಾಜ್ ಗೆ ಜಾಮೀನು ಲಭಿಸಿರಲಿಲ್ಲ. ತಹಸೀಲ್ದಾರ್ ಪೃಥ್ವಿ ಸಾನಿಕಂ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಆರೋಪಿಗಳ ಪೈಕಿ ಶಶಿರಾಜ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಆತನನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಪ್ರಮೋದ್ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಶಶಿರಾಜ್ ನನ್ನು ಆತನ ಮನೆಗೆ ತೆರಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗಾಗಿ ಶಾಸಕ ಹರೀಶ್ ಪೂಂಜಾ ಠಾಣೆಯಲ್ಲಿ ಪೊಲೀಸರ ವಿರುದ್ಧ ಆವಾಜ್ ಹಾಕಿದ್ದಲ್ಲದೆ, ರಂಪಾಟ ನಡೆಸಿದ್ದರು. ನಡುರಾತ್ರಿಯಲ್ಲಿ ಧರಣಿ ಹೈಡ್ರಾಮಾ ನಡೆಸಿದರೂ ಪೊಲೀಸರು ಕೇರ್ ಮಾಡಿರಲಿಲ್ಲ.
#MLA #HarishPoonja protests inside the #Belthangady police station and threatens the police inspector over the detention of a #BJP member. The youth president of Yuva Morcha was detained due to an unauthorised quarry. Read https://t.co/RIj0M606SJ @INCKarnataka pic.twitter.com/itl0tGIinx
— Headline Karnataka (@hknewsonline) May 19, 2024
Belthangady Harish poonja case, explosives found in quarry of BJP yuva morcha president, non bailable case filed. Commotion prevailed at the Belthangady police station after MLA Harish Poonja staged a protest against the police for arresting a man in connection with illegal quarrying at Moodala in the Melanthabettu village of Belthangady Taluk on Saturday night. The police had arrested Belthangady BJP Yuva Morcha Mandal President Shashiraj
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm