ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm