ಬ್ರೇಕಿಂಗ್ ನ್ಯೂಸ್
20-05-24 11:24 am Mangalore Correspondent ಕರಾವಳಿ
ಮಂಗಳೂರು, ಮೇ.20: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ತಿಳಿದ ಯುವಕನೊಬ್ಬ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದುದನ್ನು ಬಿಟ್ಟು ಬಂದು ತನ್ನ ಊರಿನಲ್ಲೇ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಬಳಿ ನಡೆದಿದೆ.
ಮೂಡುಬಿದಿರೆ ಸಮೀಪದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಎಂಬವರ ಪುತ್ರಿ ಶರಣ್ಯ(19) ಮತ್ತು ಮೂಲ್ಕಿಯ ಅತಿಕಾರಿಬೆಟ್ಟು ಮೈಲೊಟ್ಟು ನಿವಾಸಿ ಕಾರ್ತಿಕ್ ಪೂಜಾರಿ (20) ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರು ಮೂಲ್ಕಿಯ ಕಾಲೇಜು ಒಂದರಲ್ಲಿ ಸಹಪಾಠಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಸಣ್ಣ ವಯಸ್ಸಿನವರಾದ ಕಾರಣ ಮದುವೆಗೆ ಮನೆಯವರ ಒಪ್ಪಿಗೆ ಇರಲಿಲ್ಲ.
ಈ ನಡುವೆ, ಶರಣ್ಯಳನ್ನು ನಾಲ್ಕು ತಿಂಗಳ ಹಿಂದೆ ಕಾಲೇಜು ಬಿಡಿಸಿ ಹೆತ್ತವರು ಮೂಡುಬಿದಿರೆಯ ಮನೆಯಲ್ಲೇ ಇರುವಂತೆ ಮಾಡಿದ್ದರು. ತಂದೆ, ತಾಯಿ ಕ್ಯಾಂಟೀನ್ ಹೋಗಿ ಕೆಲಸ ಮಾಡುತ್ತಿದ್ದರೆ, ಮನೆಯಲ್ಲೇ ಉಳಿದಿದ್ದ ಶರಣ್ಯ ಖಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ಸಂಜೆ ಹೆತ್ತವರು ಮನೆಗೆ ಬಂದಾಗ, ಆಕೆಯ ಕೋಣೆಗೆ ಬಾಗಿಲು ಹಾಕಲಾಗಿತ್ತು. ಕಿಟಕಿಯಲ್ಲಿ ನೋಡಿದಾಗ, ಶಾಲನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿತ್ತು. ಮೂಡುಬಿದಿರೆ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು.
ಇದೇ ವೇಳೆ, ಕಾರ್ತಿಕ್ ಪೂಜಾರಿ ಇತ್ತೀಚೆಗೆ ಚಿತ್ರದುರ್ಗದ ಸಂಬಂಧಿಕರಲ್ಲಿಗೆ ತೆರಳಿ, ಅಲ್ಲಿನ ಗ್ಯಾರೇಜಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡತೊಡಗಿದ್ದ. ಇತ್ತ ಪ್ರೇಯಸಿ ಶರಣ್ಯ ಸಾವಿಗೆ ಶರಣಾಗಿರುವುದು ತಿಳಿಯುತ್ತಲೇ ಕಾರ್ತಿಕ್ ಏಕಾಏಕಿ ಕೆಲಸ ಬಿಟ್ಟು ಊರಿಗೆ ಬಂದಿದ್ದು ಶನಿವಾರ ಸಂಜೆ ಮನೆಗೆ ತಲುಪಿದ್ದ. ತಾಯಿ ಬೇರೆ ಕಡೆ ಹೋಗಿದ್ದಾಗ ಭಾನುವಾರ ಮುಂಜಾನೆ ಮನೆ ಪಕ್ಕದಲ್ಲಿರುವ ರೈಲ್ವೇ ಹಳಿಯಲ್ಲಿ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodbidri suicide, youth jumps infront of moving train after girlfriend commits suicide in Mangalore. The deceased is identified as Kartik Poojary (20), son of Meera and a resident of Molottu. Mulky police inspector Vidyadhar visited the spot and registered a case.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 07:18 pm
Mangalore Correspondent
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
19-07-25 12:26 pm
Mangalore Correspondent
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm