ಬ್ರೇಕಿಂಗ್ ನ್ಯೂಸ್
20-05-24 03:51 pm Mangalore Correspondent ಕರಾವಳಿ
ಮಂಗಳೂರು, ಮೇ 20: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳಕೊಂಡಿದ್ದಾರೆ.
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಸಾವನ್ನಪ್ಪಿದವರು. ಇವರು ತಮ್ಮ ಬೈಕನ್ನು ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಫುಟ್ ಪಾತಲ್ಲಿ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ, ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿದ್ದು, ಅಲ್ಲಿಂದ ಲೆಫ್ಟ್ ಬಂದು ನೇರವಾಗಿ ಹರೀಶ್ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ಹತ್ತಿದೆ. ಡಿವೈಡರ್ ಬಡಿದ ಜಾಗದಿಂದ 30 ಮೀಟರ್ ದೂರಕ್ಕೆ ಕಾರು ನುಗ್ಗಿ ಬಂದಿದ್ದು ಫಸ್ಟ್ ನ್ಯೂರೋ ಆಸ್ಪತ್ರೆ ಬಳಿ ಯುವಕನ ಪ್ರಾಣ ಕಸಿದಿದೆ.











ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬ್ರೇನ್ ಡೆಡ್ ಆಗಿದೆಯೆಂದು ವೈದ್ಯರು ತಿಳಿಸಿದ್ದಾರೆ. ಕಾರನ್ನು ಮಹಿಳೆಯೊಬ್ಬರು ಡ್ರೈವಿಂಗ್ ಮಾಡುತ್ತಿದ್ದು ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಅಮಾಯಕ ವ್ಯಕ್ತಿಯ ಪ್ರಾಣ ಹೋಗುವಂತಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ. ಹರೀಶ್ ಕೇಬಲ್ ಟೆಕ್ನೀಶಿಯನ್ ಮತ್ತು ಬಿಲ್ ಕಲೆಕ್ಷನ್ ಮಾಡುತ್ತಿದ್ದರು.
ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
ಅಪಘಾತ ವಿಷಯ ತಿಳಿಯುತ್ತಲೇ ಹರೀಶ್ ಅವರ ಪತ್ನಿ ಸ್ಥಳಕ್ಕೆ ಬಂದಿದ್ದು ಗಂಡನ ಸಾವನ್ನು ನೋಡಲಾಗದೆ ರೋದಿಸಿದ್ದಾರೆ. ಕಾರು ಹೊಡೆದ ರಭಸಕ್ಕೆ ಇವರ ತಲೆಯ ಭಾಗವೇ ಒಡೆದು ಹೋಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹರೀಶ್ ಅವರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೇಬಲ್ ಬಿಲ್ ಕಲೆಕ್ಟ್ ಮಾಡುವುದಕ್ಕಾಗಿಯೇ ಬಂದಿದ್ದರು. ರಸ್ತೆ ಬದಿ ಬೈಕ್ ನಿಲ್ಲಿಸಿ ಕುಳಿತುಕೊಂಡಿದ್ದಾಗಲೇ ಕಾರು ಜವರಾಯನಂತೆ ಬಂದೆರಗಿದೆ.
Mangalore Accident near first neuro hospital near padil 43 year old cable operator dies on spot. The deceased has been identified as Harish from Kallapu. He had pareked his bike on the footpath and was talking on the phone while a duster car women who lost control rammed on Harish who was on the footpath of neuro hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm