ಬ್ರೇಕಿಂಗ್ ನ್ಯೂಸ್
20-05-24 03:51 pm Mangalore Correspondent ಕರಾವಳಿ
ಮಂಗಳೂರು, ಮೇ 20: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳಕೊಂಡಿದ್ದಾರೆ.
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಸಾವನ್ನಪ್ಪಿದವರು. ಇವರು ತಮ್ಮ ಬೈಕನ್ನು ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಫುಟ್ ಪಾತಲ್ಲಿ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ, ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿದ್ದು, ಅಲ್ಲಿಂದ ಲೆಫ್ಟ್ ಬಂದು ನೇರವಾಗಿ ಹರೀಶ್ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ಹತ್ತಿದೆ. ಡಿವೈಡರ್ ಬಡಿದ ಜಾಗದಿಂದ 30 ಮೀಟರ್ ದೂರಕ್ಕೆ ಕಾರು ನುಗ್ಗಿ ಬಂದಿದ್ದು ಫಸ್ಟ್ ನ್ಯೂರೋ ಆಸ್ಪತ್ರೆ ಬಳಿ ಯುವಕನ ಪ್ರಾಣ ಕಸಿದಿದೆ.











ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬ್ರೇನ್ ಡೆಡ್ ಆಗಿದೆಯೆಂದು ವೈದ್ಯರು ತಿಳಿಸಿದ್ದಾರೆ. ಕಾರನ್ನು ಮಹಿಳೆಯೊಬ್ಬರು ಡ್ರೈವಿಂಗ್ ಮಾಡುತ್ತಿದ್ದು ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಅಮಾಯಕ ವ್ಯಕ್ತಿಯ ಪ್ರಾಣ ಹೋಗುವಂತಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ. ಹರೀಶ್ ಕೇಬಲ್ ಟೆಕ್ನೀಶಿಯನ್ ಮತ್ತು ಬಿಲ್ ಕಲೆಕ್ಷನ್ ಮಾಡುತ್ತಿದ್ದರು.
ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
ಅಪಘಾತ ವಿಷಯ ತಿಳಿಯುತ್ತಲೇ ಹರೀಶ್ ಅವರ ಪತ್ನಿ ಸ್ಥಳಕ್ಕೆ ಬಂದಿದ್ದು ಗಂಡನ ಸಾವನ್ನು ನೋಡಲಾಗದೆ ರೋದಿಸಿದ್ದಾರೆ. ಕಾರು ಹೊಡೆದ ರಭಸಕ್ಕೆ ಇವರ ತಲೆಯ ಭಾಗವೇ ಒಡೆದು ಹೋಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹರೀಶ್ ಅವರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೇಬಲ್ ಬಿಲ್ ಕಲೆಕ್ಟ್ ಮಾಡುವುದಕ್ಕಾಗಿಯೇ ಬಂದಿದ್ದರು. ರಸ್ತೆ ಬದಿ ಬೈಕ್ ನಿಲ್ಲಿಸಿ ಕುಳಿತುಕೊಂಡಿದ್ದಾಗಲೇ ಕಾರು ಜವರಾಯನಂತೆ ಬಂದೆರಗಿದೆ.
Mangalore Accident near first neuro hospital near padil 43 year old cable operator dies on spot. The deceased has been identified as Harish from Kallapu. He had pareked his bike on the footpath and was talking on the phone while a duster car women who lost control rammed on Harish who was on the footpath of neuro hospital.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm