ಬ್ರೇಕಿಂಗ್ ನ್ಯೂಸ್
20-05-24 08:47 pm Mangalore Correspondent ಕರಾವಳಿ
ಬಂಟ್ವಾಳ, ಮೇ 20: ಸಾಲೆತ್ತೂರು ಬಳಿಯ ಮೋಂತಿಮಾರ್ ಎಂಬಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿಯಾಗಿ ಪರಾರಿಯಾಗಿದ್ದು ಪುತ್ತೂರಿನ ಮಾಜಿ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ಪುತ್ತೂರಿನ ನೆಹರು ನಗರದ ನಿವಾಸಿ ನಿವೃತ್ತ ಸೈನಿಕ ಚಿದಾನಂದ ಕಾಮತ್ (55) ಅವರಿಗೆ ಕಾರು ಡಿಕ್ಕಿಯಾಗಿದೆ. ಕಾಮತ್ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.


ಮುಡಿಪು ಇನ್ಫೋಸಿಸ್ ಕಂಪೆನಿಯಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ತಾಯಿ ಜೊತೆ ಪುತ್ತೂರಿನಲ್ಲಿ ವಾಸವಾಗಿದ್ದರು. ಸಾಲೆತ್ತೂರಿನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಚಿದಾನಂದ ಕಾಮತ್ ಅವರಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅವರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಕಾರು ಚಾಲಕನನ್ನು ಪತ್ತೆಹಚ್ಚಿದ್ದು, ಆತನ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಟೋ ಪಲ್ಟಿಯಾಗಿ ಪ್ರಯಾಣಿಕ ಸಾವು
ಪಾಣೆಮಂಗಳೂರು ಪೇಟೆಯಲ್ಲಿ ಸೋಮವಾರ ಸಂಜೆ ನಡೆದ ಮತ್ತೊಂದು ಅಪಘಾತ ಘಟನೆಯಲ್ಲಿ ಆಟೋವೊಂದು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟವರು.
ಬಿ.ಸಿ.ರೋಡಿನಿಂದ ತೆರಳುತ್ತಿದ್ದ ಆಟೋ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಈ ಸಂದರ್ಭ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ರಭಸಕ್ಕೆ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Mangalore accident in Bantwal, 55 year old man dies after car hits bike. The deceased has been identified as Chidanand Kamath. He was a Ex Army man. A hit and run case has been registered at Bantwal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm