ಬ್ರೇಕಿಂಗ್ ನ್ಯೂಸ್
20-05-24 08:47 pm Mangalore Correspondent ಕರಾವಳಿ
ಬಂಟ್ವಾಳ, ಮೇ 20: ಸಾಲೆತ್ತೂರು ಬಳಿಯ ಮೋಂತಿಮಾರ್ ಎಂಬಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿಯಾಗಿ ಪರಾರಿಯಾಗಿದ್ದು ಪುತ್ತೂರಿನ ಮಾಜಿ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ಪುತ್ತೂರಿನ ನೆಹರು ನಗರದ ನಿವಾಸಿ ನಿವೃತ್ತ ಸೈನಿಕ ಚಿದಾನಂದ ಕಾಮತ್ (55) ಅವರಿಗೆ ಕಾರು ಡಿಕ್ಕಿಯಾಗಿದೆ. ಕಾಮತ್ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.


ಮುಡಿಪು ಇನ್ಫೋಸಿಸ್ ಕಂಪೆನಿಯಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ತಾಯಿ ಜೊತೆ ಪುತ್ತೂರಿನಲ್ಲಿ ವಾಸವಾಗಿದ್ದರು. ಸಾಲೆತ್ತೂರಿನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಚಿದಾನಂದ ಕಾಮತ್ ಅವರಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅವರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಕಾರು ಚಾಲಕನನ್ನು ಪತ್ತೆಹಚ್ಚಿದ್ದು, ಆತನ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಟೋ ಪಲ್ಟಿಯಾಗಿ ಪ್ರಯಾಣಿಕ ಸಾವು
ಪಾಣೆಮಂಗಳೂರು ಪೇಟೆಯಲ್ಲಿ ಸೋಮವಾರ ಸಂಜೆ ನಡೆದ ಮತ್ತೊಂದು ಅಪಘಾತ ಘಟನೆಯಲ್ಲಿ ಆಟೋವೊಂದು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟವರು.
ಬಿ.ಸಿ.ರೋಡಿನಿಂದ ತೆರಳುತ್ತಿದ್ದ ಆಟೋ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಈ ಸಂದರ್ಭ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ರಭಸಕ್ಕೆ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Mangalore accident in Bantwal, 55 year old man dies after car hits bike. The deceased has been identified as Chidanand Kamath. He was a Ex Army man. A hit and run case has been registered at Bantwal.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm