ಬ್ರೇಕಿಂಗ್ ನ್ಯೂಸ್
20-05-24 08:47 pm Mangalore Correspondent ಕರಾವಳಿ
ಬಂಟ್ವಾಳ, ಮೇ 20: ಸಾಲೆತ್ತೂರು ಬಳಿಯ ಮೋಂತಿಮಾರ್ ಎಂಬಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿಯಾಗಿ ಪರಾರಿಯಾಗಿದ್ದು ಪುತ್ತೂರಿನ ಮಾಜಿ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ಪುತ್ತೂರಿನ ನೆಹರು ನಗರದ ನಿವಾಸಿ ನಿವೃತ್ತ ಸೈನಿಕ ಚಿದಾನಂದ ಕಾಮತ್ (55) ಅವರಿಗೆ ಕಾರು ಡಿಕ್ಕಿಯಾಗಿದೆ. ಕಾಮತ್ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.


ಮುಡಿಪು ಇನ್ಫೋಸಿಸ್ ಕಂಪೆನಿಯಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ತಾಯಿ ಜೊತೆ ಪುತ್ತೂರಿನಲ್ಲಿ ವಾಸವಾಗಿದ್ದರು. ಸಾಲೆತ್ತೂರಿನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಚಿದಾನಂದ ಕಾಮತ್ ಅವರಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅವರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಕಾರು ಚಾಲಕನನ್ನು ಪತ್ತೆಹಚ್ಚಿದ್ದು, ಆತನ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಟೋ ಪಲ್ಟಿಯಾಗಿ ಪ್ರಯಾಣಿಕ ಸಾವು
ಪಾಣೆಮಂಗಳೂರು ಪೇಟೆಯಲ್ಲಿ ಸೋಮವಾರ ಸಂಜೆ ನಡೆದ ಮತ್ತೊಂದು ಅಪಘಾತ ಘಟನೆಯಲ್ಲಿ ಆಟೋವೊಂದು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟವರು.
ಬಿ.ಸಿ.ರೋಡಿನಿಂದ ತೆರಳುತ್ತಿದ್ದ ಆಟೋ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಈ ಸಂದರ್ಭ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ರಭಸಕ್ಕೆ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Mangalore accident in Bantwal, 55 year old man dies after car hits bike. The deceased has been identified as Chidanand Kamath. He was a Ex Army man. A hit and run case has been registered at Bantwal.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm