ಬ್ರೇಕಿಂಗ್ ನ್ಯೂಸ್
20-05-24 09:56 pm Mangalore Correspondent ಕರಾವಳಿ
ಉಳ್ಳಾಲ, ಮೇ.20: ಹರೇಕಳ ಗ್ರಾಮದ ನ್ಯೂಪಡ್ಪು ಶಾಲೆಯ ಆವರಣ ಗೋಡೆ ಕುಸಿದು ಏಳರ ಹರೆಯದ ಬಾಲಕಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಘಟನೆಯ ವೇಳೆ ಜೊತೆಗಿದ್ದ ಮತ್ತೋರ್ವ ಬಾಲಕಿ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸಿದ್ಧೀಕ್ ಮತ್ತು ಜಮೀಲಾ ದಂಪತಿಯ ಪುತ್ರಿ ಶಾಝಿಯಾ(7) ಮೃತಪಟ್ಟ ಬಾಲಕಿ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯೆಂದೇ ಗುರುತಿಸಲ್ಪಟ್ಟಿರುವ ನ್ಯೂಪಡ್ಪು ಶಾಲೆಯಲ್ಲಿ ಶಾಝಿಯಾ ಬಾನು 3ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಮುಡಿಪು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಂದ ಈ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ನಡೆಯುತ್ತಿದ್ದು, ಸಂಜೆಯ ವೇಳೆ ಸೇವಾ ಯೋಜನೆಯ ವಿದ್ಯಾರ್ಥಿಗಳು ಶ್ರಮದಾನದಲ್ಲಿ ನಿರತರಾಗಿದ್ದರು. ಇದೇ ಸಂದರ್ಭದಲ್ಲಿ ಶಾಝಿಯಾ ಬಾನು ಕೂಡಾ ಶ್ರಮದಾನ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಆಟವಾಡುತ್ತಿದ್ದಳು ಎನ್ನಲಾಗಿದೆ.


ಗೇಟ್ ನಲ್ಲಿ ಈಕೆ ಹಾಗೂ ಇನ್ನೋರ್ವ ಸಮೀಪದ ಮನೆಯ ಹನ್ನೊಂದರ ಹರೆಯದ ಬಾಲಕಿ ಆಟವಾಡುತ್ತಿದ್ದಾಗ ಗೇಟ್ ಸಮೇತ ಆವರಣ ಗೋಡೆ ಏಕಾಏಕಿಯಾಗಿ ಕುಸಿದು ಬಿದ್ದು ಶಾಝಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್, ಕೊಣಾಜೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ಧೀಕ್ ಹಾಗೂ ಜಮೀಲಾ ದಂಪತಿಗೆ ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದು, ಇದರಲ್ಲಿ ಶಾಝಿಯಾ ಬಾನು ಕೊನೆಯ ಪುತ್ರಿಯಾಗಿದ್ದಳು.
ಶಾಲೆಯಲ್ಲಿ ಮುಡಿಪು ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಶಿಬಿರ ನಡೆಯುತ್ತಿದೆ. ಈ ಸ್ಥಳಕ್ಕೆ ಬಂದಿದ್ದ ಬಾಲಕಿ ವಿಧಿಯ ಕ್ರೂರ ಲೀಲೆಗೆ ಬಾಲಕಿ ಬಲಿಯಾಗಿದ್ದಾಳೆ. ಘಟನೆಯಿಂದ ತುಂಬಾ ಬೇಸರವಾಗಿದೆ ಎಂದು ಹರೇಕಳ ಹಾಜಬ್ಬ ಶೋಕ ವ್ಯಕ್ತಪಡಿಸಿದ್ದಾರೆ.
A tragic accident occurred at Harekala Hajabba Government Senior Primary School in Newpadpu, resulting in the death of a class 3 student, Shazia Banu (7), due to the collapse of the school's compound wall. The incident happened on the evening of Monday, May 20, following heavy rains.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm