ಬ್ರೇಕಿಂಗ್ ನ್ಯೂಸ್
20-05-24 09:56 pm Mangalore Correspondent ಕರಾವಳಿ
ಉಳ್ಳಾಲ, ಮೇ.20: ಹರೇಕಳ ಗ್ರಾಮದ ನ್ಯೂಪಡ್ಪು ಶಾಲೆಯ ಆವರಣ ಗೋಡೆ ಕುಸಿದು ಏಳರ ಹರೆಯದ ಬಾಲಕಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಘಟನೆಯ ವೇಳೆ ಜೊತೆಗಿದ್ದ ಮತ್ತೋರ್ವ ಬಾಲಕಿ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸಿದ್ಧೀಕ್ ಮತ್ತು ಜಮೀಲಾ ದಂಪತಿಯ ಪುತ್ರಿ ಶಾಝಿಯಾ(7) ಮೃತಪಟ್ಟ ಬಾಲಕಿ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯೆಂದೇ ಗುರುತಿಸಲ್ಪಟ್ಟಿರುವ ನ್ಯೂಪಡ್ಪು ಶಾಲೆಯಲ್ಲಿ ಶಾಝಿಯಾ ಬಾನು 3ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಮುಡಿಪು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಂದ ಈ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ನಡೆಯುತ್ತಿದ್ದು, ಸಂಜೆಯ ವೇಳೆ ಸೇವಾ ಯೋಜನೆಯ ವಿದ್ಯಾರ್ಥಿಗಳು ಶ್ರಮದಾನದಲ್ಲಿ ನಿರತರಾಗಿದ್ದರು. ಇದೇ ಸಂದರ್ಭದಲ್ಲಿ ಶಾಝಿಯಾ ಬಾನು ಕೂಡಾ ಶ್ರಮದಾನ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಆಟವಾಡುತ್ತಿದ್ದಳು ಎನ್ನಲಾಗಿದೆ.


ಗೇಟ್ ನಲ್ಲಿ ಈಕೆ ಹಾಗೂ ಇನ್ನೋರ್ವ ಸಮೀಪದ ಮನೆಯ ಹನ್ನೊಂದರ ಹರೆಯದ ಬಾಲಕಿ ಆಟವಾಡುತ್ತಿದ್ದಾಗ ಗೇಟ್ ಸಮೇತ ಆವರಣ ಗೋಡೆ ಏಕಾಏಕಿಯಾಗಿ ಕುಸಿದು ಬಿದ್ದು ಶಾಝಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್, ಕೊಣಾಜೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ಧೀಕ್ ಹಾಗೂ ಜಮೀಲಾ ದಂಪತಿಗೆ ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದು, ಇದರಲ್ಲಿ ಶಾಝಿಯಾ ಬಾನು ಕೊನೆಯ ಪುತ್ರಿಯಾಗಿದ್ದಳು.
ಶಾಲೆಯಲ್ಲಿ ಮುಡಿಪು ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಶಿಬಿರ ನಡೆಯುತ್ತಿದೆ. ಈ ಸ್ಥಳಕ್ಕೆ ಬಂದಿದ್ದ ಬಾಲಕಿ ವಿಧಿಯ ಕ್ರೂರ ಲೀಲೆಗೆ ಬಾಲಕಿ ಬಲಿಯಾಗಿದ್ದಾಳೆ. ಘಟನೆಯಿಂದ ತುಂಬಾ ಬೇಸರವಾಗಿದೆ ಎಂದು ಹರೇಕಳ ಹಾಜಬ್ಬ ಶೋಕ ವ್ಯಕ್ತಪಡಿಸಿದ್ದಾರೆ.
A tragic accident occurred at Harekala Hajabba Government Senior Primary School in Newpadpu, resulting in the death of a class 3 student, Shazia Banu (7), due to the collapse of the school's compound wall. The incident happened on the evening of Monday, May 20, following heavy rains.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm