ಬ್ರೇಕಿಂಗ್ ನ್ಯೂಸ್
20-05-24 10:17 pm Mangalore Correspondent ಕರಾವಳಿ
ಮಂಗಳೂರು, ಮೇ 20: ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.


ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮೊರತ್ತಣೆ ನಿವಾಸಿ ಮೊಹಮ್ಮದ್ ಅಸ್ಕರ್(26) ಮತ್ತು ಮಂಜೇಶ್ವರ ಬೆಜ್ಹ ಮೂಡಂಬೈಲು ನಿವಾಸಿ ಅಬ್ದುಲ್ ನಿಸಾರ್ (29) ಬಂಧಿತ ಆರೋಪಿಗಳು. ಇವರನ್ನು ವಶಕ್ಕೆ ಪಡೆದು ಪಿಸ್ತೂಲ್-1, ಸಜೀವ ಮದ್ದುಗುಂಡು -2, ಮೊಬೈಲ್ ಫೋನು -2 ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ ರೂ. 7,15,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣ ದಾಖಲಾಗಿರುತ್ತದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐಗಳಾದ ಸುದೀಪ್ ಎಂ.ವಿ ಮತ್ತು ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore CCB police arrest two plotting for crime, seize pistol and car near Talapady. The arrested have been identified as Abdul Nisar and Mohammed Asgar. They were plotting crime in Mangalore. Mobile phones, car and pistol has been seized.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm