ಬ್ರೇಕಿಂಗ್ ನ್ಯೂಸ್
21-05-24 07:15 pm Udupi Correspondent ಕರಾವಳಿ
ಉಡುಪಿ, ಮೇ 21: ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಟಿಸಿ ಕೊಟ್ಟಿಲ್ಲವೆಂದು ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರಿನಲ್ಲಿ ನಡೆದಿದೆ. ನಿತಿನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನಿತಿನ್ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಬೇರೆ ಕಾಲೇಜಿನಲ್ಲಿ ಪಿಯುಸಿಗೆ ಸೇರಲು ಟಿಸಿ ಪಡೆಯಲೆಂದು ನಿತಿನ್ ಶಾಲೆಗೆ ಬಂದಿದ್ದ ಎನ್ನಲಾಗಿದೆ.

ಆದರೆ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸುರೇಶ್ ಭಟ್ ತನಗೆ ಬೈದಿದ್ದಾರೆ ಎಂದು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಸಾರ್ವಜನಿಕರು ಠಾಣೆ ಮುಂದೆ ಜಮಾಯಿಸಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬಂಧಿಸುವಂತೆ ಆಗ್ರಹಿಸಿದ್ದಾರೆ. ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಅಮ್ಮ ನಿಮ್ಮಲ್ಲಿ ಕೆಲವು ವಿಷಯ ಮುಚ್ಚಿಟ್ಟಿದ್ದೇನೆ !
ಅಮ್ಮ ನಾನು ನಿಮ್ಮ ಹತ್ತಿರ ತುಂಬಾ ಸತ್ಯವನ್ನು ಮುಚ್ಚಿಟ್ಟಿದ್ದೇನೆ. ನಾನು ಶಾಲೆಗೆ ಹೋದಾಗ, ನಿನಗೆ ಟಿಸಿ ಕೊಡೋದಕ್ಕೆ ಆಗೋದಿಲ್ಲ. ನೀನು ಸಿಸಿಟಿವಿ ಹಾಗೂ ಬೇರೆ ವಸ್ತುಗಳನ್ನು ಹಾಳು ಮಾಡಿದ್ದೀಯಾ. ನೀನು ನಿನ್ನ ಪೋಷಕರನ್ನು ಕರೆದುಕೊಂಡು ಬರಬೇಕು. ಜತೆಗೆ ಅದಕ್ಕೆ ದಂಡ ಕಟ್ಟಬೇಕು ಅಂತ ಮುಖ್ಯಗುರು ಹೇಳಿದ್ದಾರೆ. ಆದರೆ ನನಗೆ ನಿಮ್ಮ ಕಷ್ಟಗಳನ್ನು ನೋಡೋಕೆ ಆಗದೇ, ನಿಮ್ಮ ಹತ್ತಿರ ಏನನ್ನೂ ಹೇಳೋದಕ್ಕೆ ಆಗಲಿಲ್ಲ. ಅವರು ನನಗೆ ಶಾಲೆಯಲ್ಲಿ ತುಂಬಾನೇ ಅವಮಾನ ಮಾಡಿದ್ದಾರೆ. ಅದು ನನ್ನ ಹತ್ತಿರ ಸಹಿಸಿಕೊಳ್ಳಲು ಆಗಲಿಲ್ಲ. ಅವರಿಗೆ ನಾನೂ ಹೇಳಿದ್ದೆ, ನೀವು ಹೇಳಿದ ವಸ್ತುಗಳನ್ನು ನಾನು ಹಾಳು ಮಾಡಿಲ್ಲ ಅಂತ. ಆದರೆ ಅವರು ನೀನೇ ಇದನ್ನ ಮಾಡಿದ್ದು ಅಂತ ಹೇಳಿದ್ರು. ಅದಕ್ಕೆ ನಾನು ಟಿಸಿ ಕೊಡಿ ಸರ್ ಅಂತ ಹೇಳಿದ್ದೆ. ಆದರೆ ಆ ವಸ್ತಗಳನ್ನು ರಿಪೇರಿ ಮಾಡಿಸು, ಆಮೇಲೆ ಟಿಸಿ ಕೊಡುತ್ತೇನೆ ಅಂತ ಹೇಳಿದ್ದಾರೆ ಎಂದು ಡೆತ್ ನೋಟ್ನಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮರುಕ ಹುಟ್ಟಿಸುತ್ತದೆ.
Members of the public and family of the deceased SSLC student, who killed himself for refusal to give him a Transfer Certificate (TC) to join PU college by Byndoor PU college high school authorities, held a protest in front of Byndoor police station calling for the arrest of those who abetted his suicide while also providing suitable justice.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm