ಬ್ರೇಕಿಂಗ್ ನ್ಯೂಸ್
21-05-24 09:01 pm Mangalore Correspondent ಕರಾವಳಿ
ಮಂಗಳೂರು, ಮೇ 21: ನೇರ, ನಿಷ್ಠುರ ಮತ್ತು ಸತ್ಯವನ್ನೇ ಹೇಳುವ ವಿಶೇಷ ಗುಣ ಹೊಂದಿದ್ದ ಜನಪರ ವ್ಯಕ್ತಿಯಾಗಿದ್ದವರು ವಸಂತ ಬಂಗೇರ. ಇಂತಹ ವ್ಯಕ್ತಿಯ ಅಗಲಿಕೆಯಿಂದ ರಾಜ್ಯದ ರಾಜಕಾರಣ ಬಡವಾಗಿದೆ. ವಸಂತ ಬಂಗೇರ ಅವರ ಪ್ರತಿಮೆಯನ್ನು ಬೆಳ್ತಂಗಡಿಯಲ್ಲೇ ಸ್ಥಾಪಿಸಲು ಕ್ರಮ ವಹಿಸಲಾಗುವುದು. ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಐದು ಬಾರಿ ಶಾಸಕರಾಗಿದ್ದರೂ ಒಂದು ಬಾರಿಯೂ ಮಂತ್ರಿಯಾಗಬೇಕೆಂದು ಲಾಬಿ ನಡೆಸಿದವರಲ್ಲ. ಜನರ ಸಮಸ್ಯೆ ಹಿಡಿದು ನನ್ನ ಬಳಿಗೆ ಬರುತ್ತಿದ್ದರೇ ವಿನಾ ಒಂದು ಬಾರಿಯೂ ವೈಯಕ್ತಿಕ ಹಿತಾಸಕ್ತಿ ಹಿಡಿದು ವಿಧಾನಸೌಧಕ್ಕೆ ಬಂದಿಲ್ಲ. ನೇರ, ನಿಷ್ಠುರ ನಡೆಯ ಸತ್ಯವನ್ನೇ ಹೇಳುವ ವಿಶೇಷ ಗುಣ ಅವರಲ್ಲಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಆವತ್ತಿನಿಂದಲೂ ಕೊನೆಯ ಉಸಿರು ಇರೋವರೆಗೂ ನನಗೆ ಆಪ್ತ ಮಿತ್ರನಾಗಿದ್ದರು.




ಬೆಂಗಳೂರಿನಲ್ಲಿ ಅನಾರೋಗ್ಯದಲ್ಲಿದ್ದಾಗ ನೋಡಲು ಹೋಗಿದ್ದೆ. ಉಷಾರಾಗಿ ಬರಬಹುದು, ನಮ್ಮೊಂದಿಗೆ ಇನ್ನೂ ಜೊತೆಗಿರುತ್ತಾರೆ ಎಂದುಕೊಂಡಿದ್ದೆ. ಆಪ್ತರನ್ನು ಕಳಕೊಂಡ ನೋವು ನನ್ನನ್ನು ಕಾಡುತ್ತಿದೆ. ಆದರೆ ಸದಾ ಜನರ ಪರ ಇರುತ್ತಿದ್ದ ವ್ಯಕ್ತಿಯನ್ನು ಜನರು ಮರೆಯಲ್ಲ, ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಸ್ಥಾನ ಪಡೆಯಲಿದ್ದಾರೆ. ವಸಂತ ಬಂಗೇರ ಅವರು ತಮ್ಮ ರಾಜಕೀಯ ಜೀವನವನ್ನು ಜನರ ಪರವಾಗಿದ್ದುಕೊಂಡೇ ಸಾರ್ಥಕ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಜನಾರ್ದನ ಪೂಜಾರಿ, ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್ ರೈ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಬೆಳ್ತಂಗಡಿ ಕ್ಷೇತ್ರದ ಮುಖಂಡ ರಕ್ಷಿತ್ ಶಿವರಾಂ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರಿದ್ದರು.
CM Siddaramaiah pays tributes to Vasant Bangera at Belthangady in Mangalore. Chief Minister Siddaramaiah on Tuesday paid glowing tributes to former MLA Vasant Bangera and recalled that he and the deceased Congress leader had entered the Assembly together and had been very close.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm